Webdunia - Bharat's app for daily news and videos

Install App

ವಿವಿ ಪರೀಕ್ಷೆ ಮುಂದೂಡಿಕೆ , ಮಹಾ ಎಡವಟ್ಟು

Webdunia
ಶನಿವಾರ, 1 ಅಕ್ಟೋಬರ್ 2022 (16:13 IST)
ಪರೀಕ್ಷೆ ಬರೆಯಲು ಬಂದಿದ್ದ ನೂರಾರು ವಿದ್ಯಾರ್ಥಿಗಳ ಭವಿಷ್ಯದಲ್ಲಿ ಬೆಗಳೂರು ನಗರ ವಿವಿ ಚೆಲ್ಲಾಟವಾಡಿದೆ. ಈ ವರ್ಷದ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳು ಪರೀಕ್ಷಾ ಹಾಲ್‍ನಲ್ಲಿ ನೀಡಿದ ಪ್ರಶ್ನೆಪತ್ರಿಕೆ ಕಂಡು ದಿಗ್ಬಾಂತರಾಗುವಂತಾಗಿತ್ತು.
ವಿವಿ ಸಿಬ್ಬಂದಿಗಳು ಈ ವರ್ಷದ ಪ್ರಶ್ನೆ ಪತ್ರಿಕೆ ಬದಲಿಗೆ ಕಳೆದ ವರ್ಷದ ಪ್ರಶ್ನೆ ಪತ್ರಿಕೆ ನೀಡಿದ್ದರು.
 
ವಿವಿಯ ಮೌಲ್ಯಮಾಪನ ವಿಭಾಗದ ಕುಲ ಸಚಿವರ ಈ ನಿರ್ಲಕ್ಷ್ಯದಿಂದಾಗಿ ನಿನ್ನೆ ನಡೆಯಬೇಕಿದ್ದ ಬಿಎಸ್‍ಸಿ ಬಯೋಟೆಕ್ನಾಲಜಿಯ ನಾಲ್ಕನೆ ಸೆಮಿಸ್ಟರ್‍ನ ಜೆಜಿಟಿಕ್ ಎಂಜಿನಿಯರಿಂಗ್ ವಿಷಯದ ಪರೀಕ್ಷೆ ಮುಂದೂಡಲಾಗಿದೆ.
 
ರಾಜ್ಯದ ನಾನಾ ಮೂಲೆಗಳಿಂದ ಪರೀಕ್ಷೆ ಬರೆಯಲು ಬಂದಿದ್ದ ನೂರಾರು ವಿದ್ಯಾರ್ಥಿಗಳು ವಿವಿಯ ಈ ಬೇಜವಬ್ದಾರಿತನಕ್ಕೆ ಹಿಡಿಶಾಪ ಹಾಕುತ್ತ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಮನೆಗಳಿಗೆ ಹಿಂತಿರುಗುವಂತಾಯಿತು.
 
ತಾನು ಮಾಡಿದ ಎಡವಟ್ಟು ಮುಚ್ಚಿಟ್ಟುಕೊಳ್ಳುವ ಉದ್ದೇಶದಿಂದ ವಿವಿ ಅಧಿಕಾರಿಗಳು ತಾಂತ್ರಿಕ ಸಮಸ್ಯೆಯಿಂದ ಪರೀಕ್ಷೆ ಮುಂದೂಡಲಾಗಿದೆ ಎಂದು ಸಬೂಬು ಹೇಳುತ್ತಿದ್ದಾರೆ.
 
ತಾಂತ್ರಿಕ ಸಮಸ್ಯೆಯಿಂದ ಪರೀಕ್ಷೆ ಪೋಸ್ಟ್ ಫೋನ್ ಮಾಡಲಾಗಿದೆ ಎಂದು ವಿವಿ ಆಡಳಿತ ಲಿಖಿತ ಪ್ರಕಟಣೆ ಹೊರಡಿಸಿದೆ.
ಪ್ರಶ್ನೆ ಪತ್ರಿಕೆ ಕ್ಯೂಆರ್ ಕೋಡ್ ಬದಲಾಗಿರುವುದರಿಂದ ಇಂತಹ ಸಮಸ್ಯೆ ಉಂಟಾಗಿದೆ. ಹೀಗಾಗಿ ಪರೀಕ್ಷೆ ಮುಂದೂಡಿದ್ದೇವೆ.
 
ಹೀಗಾಗಿ ಪರೀಕ್ಷೆಯನ್ನು ಮುಂದಿನ ತಿಂಗಳಿಗೆ ಮುಂದೂಡಿ ಇಂತಹ ಪ್ರಮಾದಕ್ಕೆ ಕಾರಣರಾಗಿರುವ ಬಿಒಇ ಸಮಿತಿ ಅಧ್ಯಕ್ಷರ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಬೆಂಗಳೂರು ನಗರ ವಿವಿ ಮೌಲ್ಯ ಮಾಪನ ವಿಭಾಗದ ಕುಲಸಚಿವ ಡಾ. ಲೋಕೇಶ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಸಿವಾಗ್ತಿದೆ ಹಾಲು ಕೊಡಮ್ಮಾ.. ಕರುವಿನ ಈ ಒಂದು ವಿಡಿಯೋ ಕ್ಯೂಟ್ ಮಾತ್ರವಲ್ಲ, ಕಣ್ಣಂಚು ತೇವವಾಗಿಸುತ್ತೆ Video

Karnataka Weather: ಕರ್ನಾಟಕದಲ್ಲಿ ವಾರಂತ್ಯಕ್ಕೆ ಮಳೆಯಿರಲಿದೆಯೇ, ಇಲ್ಲಿದೆ ಹವಾಮಾನ ವರದಿ

ಭಾರೀ ಮಳೆ, ದೆಹಲಿ ಇಂದಿರಾಗಾಂಧಿ ಏರ್‌ಪೋರ್ಟ್‌ ಒಳಗೂ ನುಗ್ಗಿದ ನೀರು, Video

ಆಪರೇಷನ್ ಆಶ್ದಾರ್ ಅಡಿಯಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಂತರ್ ಮಂತರ್‌ನಲ್ಲಿ ನಡೆದ ಹಲ್ಲೆ ಪ್ರಕರಣ: 72 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಬೇಕು

ಮುಂದಿನ ಸುದ್ದಿ
Show comments