ಕೃಷ್ಣ ಗೆ ಬಿಜೆಪಿಯಲ್ಲಿ ಯಾವ ಹುದ್ದೆ ಸಿಗುತ್ತದೆ ಕಾದು ನೋಡೋಣ: ಖರ್ಗೆ

Webdunia
ಶನಿವಾರ, 25 ಮಾರ್ಚ್ 2017 (18:22 IST)
ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲಾ ಹುದ್ದೆಗಳನ್ನು ಅನುಭವಿಸಿ ಕಾಂಗ್ರೆಸ್ ಪಕ್ಷದ ವಿರುದ್ಧವೇ ಟೀಕಿಸುತ್ತಿರುವ ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರಿಗೆ ಬಿಜೆಪಿಯಲ್ಲಿ ಯಾವ ಹುದ್ದೆ ಸಿಗುತ್ತದೆ ಎಂದು ಹೋಗಿದ್ದಾರೋ ಗೊತ್ತಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಟಾಂಗ್ ನೀಡಿದ್ದಾರೆ.
 
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಒಮ್ಮಿಂದೊಮ್ಮೆಗೆ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷರಾಗಿಲ್ಲ. ಕಳೆದ ಹಲವು ವರ್ಷಗಳಿಂದ ಪಕ್ಷವನ್ನು ಮುನ್ನಡೆಸುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
 
ಪ್ರಧಾನಿ, ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿ ಹುದ್ದೆಯನ್ನು ಹೊರತುಪಡಿಸಿ ಎಲ್ಲಾ ಹುದ್ದೆಗಳನ್ನು ಅನುಭವಿಸಿರುವ ಕೃಷ್ಣ, ಬಿಜೆಪಿಯಲ್ಲಿ ಯಾವ ಹುದ್ದೆ ಅಲಂಕರಿಸಲಿದ್ದಾರೆಯೇ ಎನ್ನುವುದನ್ನು ಕಾದು ನೋಡಬೇಕಾಗಿದೆ ಎಂದು ಲೇವಡಿ ಮಾಡಿದರು.
 
ಕಾಂಗ್ರೆಸ್ ಪಕ್ಷಕ್ಕೆ ಭವಿಷ್ಯವಿಲ್ಲ. ರಾಹುಲ್ ಗಾಂಧಿಗೆ ನಾಯಕತ್ವದ ಯಾವುದೇ ಗುಣವಿಲ್ಲ ಎಂದು ಟೀಕಿಸಿ ಮಾಜಿ ಸಿಎಂ ಎಸ್.ಎಂ.ಕೃಷ್ಣ ಬಿಜೆಪಿಗೆ ಸೇರ್ಪಡೆಯಾಗಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೆಟ್ರೋ ದರ ಏರಿಕೆ ವಿಚಾರದಲ್ಲಿ ಬಿಜೆಪಿ ನಾಯಕರಿಂದ ಮೊಸಳೆ ಕಣ್ಣೀರು: ಸಿಎಂ ಸಿದ್ದರಾಮಯ್ಯ ಕಿಡಿ

ಯಾವಾಗ್ಲೂ ಹೈಕಮಾಂಡ್ ಹೈಕಮಾಂಡೇ, ಡಿಕೆಶಿಗೆ ಯತೀಂದ್ರ ಸಿದ್ದರಾಮಯ್ಯ ಕೌಂಟರ್

ಜನರಿಗೆ ತೊಂದರೆ ಕೊಡಲ್ಲ, ಮೆಟ್ರೋ ದರ ಬಗ್ಗೆ ಗುಡ್ ನ್ಯೂಸ್ ಕೊಟ್ಟ ಡಿಕೆ ಶಿವಕುಮಾರ್

ಏನಿದು ಹಿಂಗೆ ಆಗೋಯ್ತಲ್ಲಾ... ಎಸ್ಕಲೇಟರ್ ಹತ್ತಿದ ಬೆಕ್ಕು ಫುಲ್ ಕನ್ ಫ್ಯೂಸ್ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments