ಅಧಿಕಾರಿಗಳ ನಿರೀಕ್ಷೆಯಲ್ಲಿ ಕಾದು ಸುಸ್ತಾದ ಸಾರ್ವಜನಿಕರು!

Webdunia
ಬುಧವಾರ, 30 ಜನವರಿ 2019 (18:35 IST)
ಬೀಜಾಡಿ ಸರ್ವಿಸ್ ರಸ್ತೆ ಕಾಮಗಾರಿಗೆ ಅಧಿಕಾರಿಗಳ ನಿರೀಕ್ಷೆಯಲ್ಲಿ ಜನರು ಕಾದು ಸುಸ್ತಾದ ಘಟನೆ ನಡೆದಿದೆ.  

ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರ ಕಚೇರಿಯಿಂದ ಹೆದ್ದಾರಿಗೆ ಸಂಬಂಧಪಟ್ಟ  ಪಂಚಾಯಿತಿಗಳಿಗೆ ಸಂದೇಶವೊಂದು ಬಂದಿದ್ದು, ಸಂದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ಬಗ್ಗೆ ಎಲ್ಲೆಲ್ಲಿ ಸಮಸ್ಯೆಗಳಿವೆ ಅಲ್ಲಲ್ಲಿನ ಸಾರ್ವಜನಿಕರು ಸಮಸ್ಯೆಗಳ ಪಟ್ಟಿ ಮಾಡಿ ಅಧಿಕಾರಿಗಳ ಗಮನಕ್ಕೆ ತರುವಂತೆ ತಿಳಿಸಲಾಗಿತ್ತು. ಅದರಂತೆ ಬೀಜಾಡಿ ಸರ್ವಿಸ್ ರೋಡ್ ಕಳೆದ ನವೆಂಬರ್ ನಲ್ಲಿ ಅಗೆದು ಹಾಕಿ ಹೋದ ನವಯುಗ ಕಂಪನಿ ಮತ್ತೆ ಈ ಕಡೆ ಬಾರದೇ ಇದ್ದುದನ್ನು ಕಂಡು ಹಲವು ಬಾರಿ ಅಧಿಕಾರಿಗಳಿಗೆ ಮನವಿ ಮಾಡಲಾಗಿತ್ತು. ಇಂದು ಜಿಲ್ಲಾಧಿಕಾರಿಗಳು ಆಗಮಿಸುತ್ತಾರೆ ಎನ್ನುವ ನಿರೀಕ್ಷೆಯಲ್ಲಿ ಒಂದಷ್ಟು ಮಂದಿ ಸಾರ್ವಜನಿಕರು, ಬೀಜಾಡಿ ಸರ್ವಿಸ್ ರಸ್ತೆ ಹೋರಾಟ ಸಮಿತಿಯ ಸದಸ್ಯರು, ಬೀಜಾಡಿಯ ಯೂಟರ್ನ್ ನಲ್ಲಿ ನಿಂತು ಸಂಜೆ ನಾಲ್ಕು ಗಂಟೆಯಿಂದ ಕಾಯುತ್ತಿದ್ದರು.

ಸಂಜೆ ಹೊತ್ತಿಗೆ ಜಿಲ್ಲಾಧಿಕಾರಿ ಆಗಮಿಸುವುದಿಲ್ಲ.  ಬದಲಿಗೆ ಕುಂದಾಪುರದ ಸಹಾಯಕ ಆಯುಕ್ತ ಅರುಣ್ ಪ್ರಭಾ ಮತ್ತು ನವಯುಗ ಕಂಪನಿಯ ಪ್ರಮುಖರು  ಆಗಮಿಸುತ್ತಾರೆ ಎನ್ನುವ ಸೂಚನೆ ಬಂತು. ಸ್ಥಳೀಯ ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಲತಾ ಸುರೇಶ್ ಶಟ್ಟಿ, ಸ್ಥಳೀಯ ತಾಲ್ಲೂಕು ಪಂಚಾಯತಿ ಸದಸ್ಯೆ ವೈಲೆಟ್ ಬರೆಟ್ಟೋ  ಜೊತೆಗೆ ಪ್ರಮುಖ ಉದ್ದಿಮೆದಾರರು, ಸಾರ್ವಜನಿಕರು, ಹೋರಾಟ ಸಮಿತಿ ಪ್ರಮುಖರು, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸದಸ್ಯರು ಸೇರಿದ್ದರು. ಆದರೆ ಅಧಿಕಾರಿಗಳು ಸಾಲಿಗ್ರಾಮದ ವರೆಗೆ ವೀಕ್ಷಣೆಯನ್ನು ಮಾಡಿ ಪುನಃ ಉಡುಪಿಗೆ ಹಿಂತಿರುಗಿದ ಕಾರಣ ಇಲ್ಲಿ ಸೇರಿದ ಸಾರ್ವಜನಿಕರಲ್ಲಿ ಆಕ್ರೋಶ ವ್ಯಕ್ತವಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೂರಜ್​ ರೇವಣ್ಣಗೆ ಮತ್ತೆ ಸಂಕಷ್ಟ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಬಿ ರಿಪೋರ್ಟ್‌ ತಿರಸ್ಕರಿಸಿದ ಕೋರ್ಟ್‌

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಾಟಿ ಕೋಳಿ ತಿಂದ ಸಿದ್ದರಾಮಯ್ಯ ಎಂದ ಶಾಸಕ ಸುರೇಶ್ ಕುಮಾರ್: ರಾಜ್ಯಕ್ಕೆ ವೆಜ್ ಸಿಎಂ ಬೇಕಿತ್ತಾ ಎಂದ ನೆಟ್ಟಿಗರು

ಡಿಕೆ ಶಿವಕುಮಾರ್ ಜೊತೆ ಬ್ರೇಕ್ ಫಾಸ್ಟ್ ಬಳಿಕ ಫೈನಲ್ ನಿರ್ಧಾರ ಹೇಳಿದ ಸಿಎಂ ಸಿದ್ದರಾಮಯ್ಯ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ಮುಂದಿನ ಸುದ್ದಿ
Show comments