ಮಂತ್ರಿಮಾಲ್ನ ಹಿಂಭಾಗದ ಗೋಡೆ ಕುಸಿತದ ಪರಿಣಾಮವಾಗಿ ಇಬ್ಬರು ಗಾಯಗೊಂಡಿರುವ ಘಟನೆ ರಾಜಧಾನಿ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಸಂಭವಿಸಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಮಾಲ್ನಿಂದ ಗ್ರಾಹಕರನ್ನು ಹಾಗೂ ಸಿಬ್ಬಂದಿಯನ್ನು ಹೊರಗೆ ಕಳುಹಿಸಲಾಗಿದ್ದು, ನೂರಾರು ಜನರು ಒಮ್ಮೆಲೆ ಹೊರಬಂದ ಕಾರಣ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ಗೋಡೆ ಕುಸಿತಕ್ಕೆ ನೀರಿನ ಸೋರಿಕೆಯೇ ಕಾರಣ ಎಂದು ಹೇಳಲಾಗುತ್ತಿದ್ದು, ಸ್ಥಳಕ್ಕೆ ಮಲ್ಲೇಶ್ವರಂ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದೆ. ಗೋಡೆ ಕುಸಿತದ ಸುದ್ದಿ ತಿಳಿಯುತ್ತಿದ್ದಂತೆ ಮಾಲ್ನಲ್ಲಿದ್ದ ಜನರು ಆತಂಕದಿಂದ ಹೊರಬರುತ್ತಿದ್ದ ದೃಶ್ಯಗಳು ಕಂಡು ಬಂದವು.
ಮಂತ್ರಿ ಮಾಲ್ನ ಹಿಂಭಾಗದ ಗೋಡಿ ಕುಸಿತದಿಂದ ಅಕ್ಕಪಕ್ಕದ ಕಟ್ಟಡಗಳಿಗೂ ಹಾನಿ ಸಂಭವಿಸಿದ್ದು, ತಾತ್ಕಾಲಿಕವಾಗಿ ಮಂತ್ರಿ ಮಾಲ್ನ್ನು ಬಂದ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.