Webdunia - Bharat's app for daily news and videos

Install App

ವಕ್ಫ್ ವಿರುದ್ಧ ಇಂದಿನಿಂದ ಬಿಜೆಪಿ ಉಗ್ರ ಹೋರಾಟ

Krishnaveni K
ಸೋಮವಾರ, 4 ನವೆಂಬರ್ 2024 (10:03 IST)
ಬೆಂಗಳೂರು: ರಾಜ್ಯಾದ್ಯಂತ ಸದ್ದು ಮಾಡುತ್ತಿರುವ ವಕ್ಫ್  ವಿವಾದದ ಬಗ್ಗೆ ಇಂದಿನಿಂದ ಬಿಜೆಪಿ ಹೋರಾಟ ಆರಂಭಿಸಲಿದೆ.  ವಿಜಯಪುರದಲ್ಲಿ ಇಂದಿನಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.

ವಕ್ಫ್ ಬೋರ್ಡ್ ಹಲವು ರೈತರ ಜಮೀನುಗಳಿಗೂ ನೋಟಿಸ್ ನೀಡಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಇದು ವಿವಾದವಾಗುತ್ತಿದ್ದಂತೇ ಈಗ ಸಿಎಂ ಸಿದ್ದರಾಮಯ್ಯ ರೈತರ ಜಮೀನುಗಳಿಗೆ ನೀಡಿದ್ದ ನೋಟಿಸ್ ವಾಪಸ್ ಪಡೆಯಲು ಹೇಳಿದ್ದರು. ಹಾಗಿದ್ದರೂ ವಿವಾದ ತಣ್ಣಗಾಗಿಲ್ಲ.

ಕೇವಲ ನೋಟಿಸ್ ಹಿಂಪಡೆದರೆ ಸಾಲದು, ವಕ್ಫ್ ಅದಾಲತ್ ನ್ನೇ ರದ್ದುಗೊಳಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಇಂದು ಬೃಹತ್ ಸಮಾವೇಶದ ಮೂಲಕ ವಕ್ಫ್ ವಿರುದ್ಧ ಹೋರಾಟಕ್ಕೆ ಚಾಲನೆ ನೀಡಲಿದೆ. ಉಪಚುನಾವಣೆ ಹೊಸ್ತಿಲಲ್ಲಿ ವಕ್ಫ್ ವಿವಾದ ಬಿಜೆಪಿಗೆ ಸರ್ಕಾರದ ವಿರುದ್ಧ ದೊಡ್ಡ ಅಸ್ತ್ರ ಸಿಕ್ಕಂತಾಗಿದೆ.

ಇನ್ನು, ನೋಟಿಸ್  ಹಿಂಪಡೆಯುತ್ತೇವೆ ಎಂದರೂ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವುದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದಿದ್ದಾರೆ. ಇದಕ್ಕೆ ಕಿವಿಗೊಡದ ಬಿಜೆಪಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುವ ಮೂಲಕ ರಾಜ್ಯ ಸರ್ಕಾರ ಮತ್ತು  ವಕ್ಫ್ ಮಂಡಳಿಗೆ ಬಿಸಿ ಮುಟ್ಟಿಸಲು ಮುಂದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಮುಂದಿನ ಸುದ್ದಿ
Show comments