Webdunia - Bharat's app for daily news and videos

Install App

ಹಿಂದೂಗಳಿಗೆ ಮಾತ್ರವಲ್ಲ, ಮುಸ್ಲಿಮ್ ಕುಟುಂಬಗಳಿಗೂ ವಕ್ಫ್ ನೋಟಿಸ್

Krishnaveni K
ಶುಕ್ರವಾರ, 1 ನವೆಂಬರ್ 2024 (10:50 IST)
ಧಾರವಾಡ: ರಾಜ್ಯದಾದ್ಯಂತ ಸದ್ದು ಮಾಡುತ್ತಿರುವ ವಕ್ಫ್ ಬೋರ್ಡ್ ನೋಟಿಸ್ ಬಿಸಿ ಕೇವಲ ಹಿಂದೂ ಕುಟುಂಬಗಳಿಗೆ ಮಾತ್ರವಲ್ಲ, ಮುಸ್ಲಿಮ್ ಕುಟುಂಬಗಳಿಗೂ ತಟ್ಟಿದೆ. ಧಾರವಾಡ, ವಿಜಯಪುರದಲ್ಲಿ ಅನೇಕ ಮುಸ್ಲಿಂ ಕುಟುಂಬಗಳಿಗೂ ವಕ್ಫ್ ನೋಟಿಸ್ ನೀಡಿದೆ.

ವಿಜಯಪುರದಲ್ಲಿ ವಕ್ಫ್ ಬೋರ್ಡ್ ನೋಟಿಸ್ ವಿವಾದ ಮೊದಲು ಸುದ್ದಿಯಾಗಿತ್ತು. ಇಲ್ಲಿ ನೂರಾರು ಎಕರೆ ರೈತರ ಜಮೀನಿಗೆ ವಕ್ಫ್ ಬೋರ್ಡ್ ನೋಟಿಸ್ ನೀಡಿದ ಆರೋಪ ಕೇಳಿಬಂದಿದೆ. ಈ ಹಿನ್ನಲೆಯಲ್ಲಿ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆಗಳೂ ನಡೆದವು. ಬಳಿಕ ಸಿಎಂ ಸಿದ್ದರಾಮಯ್ಯ ರೈತರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಲ್ಲ ಎಂದರು.

ಇದಾದ ಬಳಿಕ ಕಲಬುರಗಿಯಲ್ಲೂ ರೈತರ ಜಮೀನಿನ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿರುವುದು ಪತ್ತೆಯಾಗಿತ್ತು. ಉತ್ತರ ಕರ್ನಾಟಕದ ಆರು ಜಿಲ್ಲೆಗಳ 400 ಮುಸ್ಲಿಮ್ ಕುಟುಂಬಗಳಿಗೂ ವಕ್ಫ್ ನೋಟಿಸ್ ಬಂದಿರುವುದು ತಿಳಿದುಬಂದಿದೆ. ಕಳೆದ 10 ವರ್ಷಗಳಿಂದ ಈ ಕುಟುಂಬಗಳು ತಮ್ಮ ಆಸ್ತಿ ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದ್ದಾರಂತೆ.

ವಿಜಯಪುರದಲ್ಲಿ ಅತೀ ಹೆಚ್ಚು ಮುಸ್ಲಿಮರಿಗೆ ನೋಟಿಸ್ ಜಾರಿಯಾಗಿದೆ ಎನ್ನಲಾಗಿದೆ. ಧಾರವಾಡದಲ್ಲಿ 20 ಕ್ಕೂ ಹೆಚ್ಚು ಮುಸ್ಲಿಮ್ ಕುಟುಂಬದವರ ಆಸ್ತಿ ಪಹಣಿಯಲ್ಲಿ ವಕ್ಫ್ ಎಂದು ನಮೂದಾಗಿರುವುದು ತಿಳಿದುಬಂದಿದೆ. ಇದೀಗ ಧಾರವಾಡ ರೈತರು ವಕ್ಫ್ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ವಿಜಯಪುರದಲ್ಲಿ ಈಗಾಗಲೇ ವಿವಾದ ದೊಡ್ಡ ಮಟ್ಟದಲ್ಲಿದ್ದು ಪ್ರತಿಭಟನೆಗಳು ನಡೆದಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಬಿಜೆಪಿ ರಾಜಾಧ್ಯಕ್ಷ ನೇಮಕ ವಿಳಂಬದ ಹಿಂದಿನ ಕಾರಣ ಬಿಚ್ಚಿಟ್ಟ ಶಾಸಕ ಬಸನಗೌಡ ಪಾಟೀಲ್

ಶೋಷಿತರನ್ನು ಮತಬ್ಯಾಂಕ್ ಮಾಡಿ ವಂಚಿಸುತ್ತ ಬಂದ ಕಾಂಗ್ರೆಸ್ ಪಕ್ಷ: ವಿಜಯೇಂದ್ರ

ಮುಂದಿನ ಸುದ್ದಿ
Show comments