Webdunia - Bharat's app for daily news and videos

Install App

ಕೇಂದ್ರ ಸರ್ಕಾರಿ ಪಿಂಚಣಿದಾರರಿಗೆ ಎಚ್ಚರಿಕೆ: ಬೇಗನೆ ಈ ಕೆಲಸ ಮಾಡಿ, ಇಲ್ಲವಾದರೆ ಪಿಂಚಣಿ ಕಟ್

Webdunia
ಶುಕ್ರವಾರ, 11 ಫೆಬ್ರವರಿ 2022 (14:33 IST)
ನೀವು ಪಿಂಚಣಿ ತೆಗೆದುಕೊಳ್ಳುತ್ತೀರಾ...? ಅಗಾದರೆ ಒಂದು ವಿಷಯ ಖಚಿತ ತಿಳಿದುಕೊಳ್ಳಬೇಕು. ಜೀವ ಪ್ರಮಾಣಪತ್ರ ಸಲ್ಲಿಸಲು ಕೇಂದ್ರ ಸರ್ಕಾರ ಈಗಾಗಲೇ ಎರಡು ಬಾರಿ ಗಡುವನ್ನು ವಿಸ್ತರಿಸಿದ್ದು, ಇದು ಫೆಬ್ರವರಿ 28 ರಂದು ಕೊನೆಗೊಳ್ಳುತ್ತದೆ. ಹಾಗಾಗಿ ಯಾರಾದರೂ ಇನ್ನೂ ಲೈಫ್ ಸರ್ಟಿಫಿಕೇಟ್ ಸಲ್ಲಿಸದಿದ್ದರೆ, ತಕ್ಷಣ ಸಲ್ಲಿಸಿ. ಇಲ್ಲದಿದ್ದರೆ ತೊಂದರೆಗೆ ಸಿಲುಕಬೇಕಾಗುತ್ತದೆ. ಪಿಂಚಣಿ ಕೂಡ ಬರುವುದಿಲ್ಲ. ಜೀವಿತ ಪ್ರಮಾಣ ಪತ್ರ ನೀಡಿದ ನಂತರವೇ ಮತ್ತೆ ಪಿಂಚಣಿ ಪಡೆಯಲು ಸಾಧ್ಯವಾಗುತ್ತದೆ.
ಸಾರ್ವಜನಿಕ ವಲಯದ ನೌಕರರು ನಿವೃತ್ತಿಯ ನಂತರ ಪಿಂಚಣಿ ಪಡೆಯುತ್ತಾರೆ. ಅವರೆಲ್ಲರೂ ಜೀವಿತ ಪ್ರಮಾಣ ಪತ್ರ ಸಲ್ಲಿಸಬೇಕು. ಇದು ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಕೆಲಸ ಮಾಡುವ ಎಲ್ಲಾ ಉದ್ಯೋಗಿಗಳಿಗೆ ಅನ್ವಯಿಸುತ್ತದೆ. ನಿವೃತ್ತಿಯ ನಂತರ ಉದ್ಯೋಗಿಗೆ ಪಿಂಚಣಿ ಮಂಜೂರು ಮಾಡಲು, ಸಂಬಂಧಿತ ಕಛೇರಿಯು ಉದ್ಯೋಗಿಯು ಜೀವಿತ ಪ್ರಮಾಣಪತ್ರವನ್ನು (ಉಳಿವಿನ ಪುರಾವೆ) ಸಲ್ಲಿಸುವ ಅಗತ್ಯವಾಗಿದೆ. ಆಗ ಮಾತ್ರ ಅವರು ನಿಯಮಿತವಾಗಿ ಪಿಂಚಣಿ ಪಡೆಯುತ್ತಾರೆ. ಇಲ್ಲದಿದ್ದರೆ ಪಿಂಚಣಿ ತಡೆಹಿಡಿಯಲಾಗುವುದು.ಈಗೆ ಪಿಂಚಣಿಗಳನ್ನು ಸ್ವೀಕರಿಸುವವರು ಪಿಂಚಣಿ ನೀಡುವ ಬ್ಯಾಂಕ್ ಅಥವಾ ಅಂಚೆ ಕಚೇರಿಗೆ ಜೀವಿತಾವಧಿಯ ಪ್ರಮಾಣಪತ್ರವನ್ನು ಸಲ್ಲಿಸಬೇಕಾಗುತ್ತದೆ. ಪರ್ಯಾಯವಾಗಿ, ಜೀವನ ಪ್ರಮಾಣ ಪತ್ರವನ್ನು ಆನ್‌ಲೈನ್‌ ಮೂಲಕವೂ ತೋರಿಸಬಹುದು.
ಜೀವಿತಾ ಪ್ರಮಾಣ ಪತ್ರವನ್ನು ಸಲ್ಲಿಸಲು ಗಡುವು ಸಾಮಾನ್ಯವಾಗಿ ಪ್ರತಿ ವರ್ಷ ನವೆಂಬರ್ 30 ಆಗಿರುತ್ತದೆ. ಆದರೆ ಈ ಬಾರಿ ಗಡುವನ್ನು ಡಿಸೆಂಬರ್ 31, 2021 ರವರೆಗೆ ವಿಸ್ತರಿಸಲಾಗಿತ್ತು. ಆದರೆ, ಈ ಗಡುವನ್ನು ಮತ್ತೆ ಫೆಬ್ರವರಿ 28, 2022 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ರಾಜ್ಯಗಳಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗವು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಹಿರಿಯ ನಾಗರಿಕರ ಆರೋಗ್ಯದ ದೃಷ್ಟಿಯಿಂದ ಕೇಂದ್ರ ಸರ್ಕಾರವು ಈ ಗಡುವನ್ನು ವಿಸ್ತರಿಸಿದೆ. ಇದರೊಂದಿಗೆ, ಎಲ್ಲಾ ಕೇಂದ್ರ ಸರ್ಕಾರದ ಪಿಂಚಣಿದಾರರು ಈಗ 28.02.2022 ರವರೆಗೆ ಜೀವ ಪ್ರಮಾಣ ಪತ್ರವನ್ನು ಸಲ್ಲಿಸಬಹುದು.
ಹಾಗಾಗಿ ನೀವು ಈಗಾಗಲೇ ಲೈಫ್ ಸರ್ಟಿಫಿಕೇಟ್ ಸಲ್ಲಿಸಿದ್ದರೆ, ತೊಂದರೆ ಇಲ್ಲ. ಆದರೆ, ನೀವು ಇನ್ನೂ ಈ ಜೀವನ ಪ್ರಮಾಣಪತ್ರವನ್ನು ಸಲ್ಲಿಸದಿದ್ದರೆ, ತಕ್ಷಣವೇ ಕೆಲಸವನ್ನು ಪೂರ್ಣಗೊಳಿಸಿ. ಇಲ್ಲದಿದ್ದರೆ ಪಿಂಚಣಿ ಪಡೆಯಲು ತೊಂದರೆಯಾಗುತ್ತದೆ. ಶಾಶ್ವತ ಪಿಂಚಣಿ ಪಡೆಯಲು ಬಯಸುವವರು ಜೀವಿತ ಪ್ರಮಾಣ ಪತ್ರ ನೀಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ವಾರದ ಹಿಂದೆಯಷ್ಟೇ ಮುಂಬಡ್ತಿ ಪಡೆದಿದ್ದ ಡಿ ರೂಪಾ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

Raja Raghuvanshi murder case: ಮೇಘಾಲಯ SIT ಸೋನಮ್ ಮುಂದಿಡುವ ಪ್ರಶ್ನೆಗಳು ಹೀಗಿದೆ

ಮುಂದಿನ ಸುದ್ದಿ
Show comments