Select Your Language

Notifications

webdunia
webdunia
webdunia
webdunia

ಚಿಕಿತ್ಸೆ ಫಲಕಾರಿಯಾಗದೇ ಯೋಧ ಹುತಾತ್ಮ

ಚಿಕಿತ್ಸೆ ಫಲಕಾರಿಯಾಗದೇ ಯೋಧ ಹುತಾತ್ಮ
ಚಿಕ್ಕೋಡಿ , ಭಾನುವಾರ, 23 ಡಿಸೆಂಬರ್ 2018 (15:47 IST)
ಕರ್ತವ್ಯನಿರತ ಯೋಧನೊಬ್ಬ ಅಪಘಾತವೊಂದರಲ್ಲಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿರುವ ಘಟನೆ ನಡೆದಿದೆ.

ಯೋಧನ ಪಾರ್ಥಿವ ಶರೀರ ಹುಟ್ಟೂರಾದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಯಿಂಗ್ಲಜ್ ಗ್ರಾಮಕ್ಕೆ ಆಗಮಿಸಿತು.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಯಿಂಗ್ಲಜ ಗ್ರಾಮದ ಹುತಾತ್ಮ ಯೋಧ ಸಾಗರ ಸುರೇಶ ಮಗದುಮ್ಮ(36) ಹುತಾತ್ಮರಾಗಿದ್ದಾರೆ.

ರಾಜಸ್ಥಾನದಲ್ಲಿ ನಡೆದ ಅಪಘಾತದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮರಾಗಿದ್ದರು.

ಯೋಧನ ಪ್ರಾರ್ಥಿವ ಶರೀರ ಅಂತಿಮ ದರ್ಶನಕ್ಕೆ ಗ್ರಾಮದಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಗ್ರಾಮದಲ್ಲಿ ಯೋಧನ ಪಾರ್ಥಿವ ಶರೀರ ಮೆರವಣಿಗೆ ನಡೆಸಿ ನಂತರ ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗುವದು ಎಂದು  ಜಿಲ್ಲಾಡಳಿತ ಹಾಗೂ ಯೋಧನ ಕುಟುಂಬ ವರ್ಗದ  ಮೂಲಗಳು ತಿಳಿಸಿವೆ.




Share this Story:

Follow Webdunia kannada

ಮುಂದಿನ ಸುದ್ದಿ

ಸರಕಾರ ದುಡ್ಡಲ್ಲೇ ಕಾಂಗ್ರೆಸ್ ಭವನದ ಪಾರ್ಕಿಂಗ್ ಗೆ ಕಾಂಕ್ರೀಟ್!