Webdunia - Bharat's app for daily news and videos

Install App

ರಾಜ್ಯದ ಮೊದಲ ಪ್ಲಾಸ್ಮಾ ತೆರಪಿ ಪ್ರಯೋಗ ಆಗಿದ್ದೆಲ್ಲಿ?

Webdunia
ಶನಿವಾರ, 3 ಅಕ್ಟೋಬರ್ 2020 (12:00 IST)
ಕೇವಲ ಪ್ರತಿಷ್ಠಿತ ಖಾಸಗಿ ಹಾಗೂ ಮಲ್ಟಿ ಸ್ಪೆಷಲ್ ಆಸ್ಪತ್ರೆಗಳಿಗೆ ಮಾತ್ರ ಸೀಮಿತವಾಗಿದ್ದ ಪ್ಲಾಸ್ಮಾ ತೆರಫಿ ಪ್ರಯೋಗ ತಾಲೂಕಿನ ಸರಕಾರಿ ಆಸ್ಪತ್ರೆಗೂ ಕಾಲಿಟ್ಟಿದೆ.

ಇದೇ ಮೊದಲ ಬಾರಿಗೆ ಕೊಪ್ಪಳದ ಗಂಗಾವತಿ ನಗರದ ತಾಲೂಕಾ  ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ಪ್ಲಾಸ್ಮಾ ತೆರಪಿ ನಡೆಯುತ್ತಿದೆ.

ಈ ಮೂಲಕ ರಾಜ್ಯಮಟ್ಟದಲ್ಲಿ ಇದೇ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಅದರಲ್ಲೂ ತಾಲೂಕು ಹಂತದ ಆಸ್ಪತ್ರೆಯಲ್ಲಿ ಪ್ಲಾಸ್ಮಾ ತೆರಫಿಗೆ ಯತ್ನಿಸಿದ ದಾಖಲೆಯನ್ನು ಗಂಗಾವತಿ ವೈದ್ಯರು ಮಾಡಿದ್ದಾರೆ.
ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಪ್ಲಾಸ್ಮಾ ತೆರಪಿಗೆ ನಗರದ 65 ವರ್ಷದ ವೃದ್ಧರಿಗೆ ಸೋಂಕು ದೃಢಪಟ್ಟು ಕಳೆದ ಎಂಟು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ವೃದ್ಧರಿಗೆ ಪ್ಲಾಸ್ಮಾ ತೆರಪಿ ಚಿಕಿತ್ಸೆಗೆ ಒಳಪಡಿಸಲಾಗಿದೆ.

ಕೋವಿಡ್​​ನಿಂದ ಸಂಪೂರ್ಣ ಗುಣಮುಖರಾದ ನಾಲ್ವರು ವ್ಯಕ್ತಿಗಳಿಂದ ಪ್ಲಾಸ್ಮಾ ಸಂಗ್ರಹಿಸಲಾಗಿತ್ತು. ಹುಬ್ಬಳ್ಳಿಯಲ್ಲಿ ಸಂಗ್ರಹಿಸಲಾಗಿದ್ದ ಪ್ಲಾಸ್ಮಾವನ್ನು ಪ್ರತ್ಯೇಕಿಸಿ ತಂದು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಗೆ ಆ ಪ್ಲಾಸ್ಮಾ ನೀಡಲಾಗಿದೆ. ಸದ್ಯ "ವ್ಯಕ್ತಿ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದಿದೆ" ಎಂದು ಗಂಗಾವತಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಈಶ್ವರ ಸವಡಿ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments