Select Your Language

Notifications

webdunia
webdunia
webdunia
webdunia

ದೇಗುಲದ ಅರ್ಚಕನಿಂದ ಶೌಚಾಲಯ ಶುಚಿ ಮಾಡಿಸಿದ ಅಧಿಕಾರಿ!

ದೇಗುಲದ ಅರ್ಚಕನಿಂದ ಶೌಚಾಲಯ ಶುಚಿ ಮಾಡಿಸಿದ ಅಧಿಕಾರಿ!
bangalore , ಶುಕ್ರವಾರ, 2 ಜುಲೈ 2021 (17:24 IST)
ಅರ್ಚಕನಿಂದ ಶೌಚಾಲಯವನ್ನು ಅಧಿಕಾರಿಯೊಬ್ಬರು ಶುಚಿ ಮಾಡಿಸಿದ ಘಟನೆ ಕೋಲಾರದ ಐತಿಹಾಸಿಕ ಬಂಗಾರು ತಿರುಪತಿ ದೇವಸ್ಥಾನದಲ್ಲಿ ನಡೆದಿದ್ದು, ಈ ಫೋಟೊಗಳು ಇದೀಗ ವೈರಲ್ ಆಗಿದೆ.
ಕೆಜಿಎಫ್ ತಾಲೂಕಿನ ಬೇತಮಂಗಲ ಹೋಬಳಿಯ ಬಂಗಾರು ತಿರುಪತಿ ದೇಗುಲ ಕಾರ್ಯ ನಿರ್ವಾಹಕ ಅಧಿಕಾರಿ ಸುಬ್ರಹ್ಮಣಿ ಎಂಬುವವರು ದೇವಾಲಯದ ಅರ್ಚಕ ಲಕ್ಷ್ಮೀನಾರಾಯಣಪ್ಪ ಅವರಿಂದ ದೇವಾಲಯದ ಪ್ರಾಂಗಣ ಮತ್ತು ಶೌಚಾಲಯ ಶುಚಿಗೊಳಿಸಿದ್ದಾರೆ.
ಅಂಗಳ ಗ್ರಾಮದ ದೇಗುಲವೊಂದರಲ್ಲಿ ಅರ್ಚಕರಾಗಿ ಕೆಲಸ ಮಾಡ್ತಿರುವ ಲಕ್ಷ್ಮೀನಾರಾಯಣ ಬಂಗಾರು ತಿರುಪತಿ ದೇಗುಲಕ್ಕೆ ಹೂಗಳನ್ನ ತಂದು ಮುಡಿಸುವ ಕೆಲಸ ಮಾಡುತ್ತಿದ್ದಾರೆ. ಲಾಕ್ ಡೌನ್ ಹಿನ್ನಲೆ ಬಂಗಾರು ತಿರುಪತಿ ದೇಗುಲದಲ್ಲಿ ಡಿ ಗ್ರೂಪ್ ಸಿಬ್ಬಂದಿ ಅನುಪಸ್ಥಿತಿ ಹಿನ್ನೆಲೆಯಲ್ಲಿ ಈ ಕೆಲಸವನ್ನು ಅರ್ಚಕರಿಂದ ಮಾಡಿಸಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಂ 1 ಕೈಗಾರಿಕಾ ಸ್ನೇಹೀ ರಾಜ್ಯವಾಗುವತ್ತ ಕರ್ನಾಟಕ ದಾಪುಗಾಲು: ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌