Publish Date: Sun, 06 Mar 2022 (14:30 IST)
Updated Date: Sun, 06 Mar 2022 (15:32 IST)
ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಬಿಎಂಪಿ ವಾರ್ಡ್ ನಂ. 17 ರ ಜೆಪಿ ಪಾರ್ಕಿನಲ್ಲಿ ವಾಚ್ ಟವರ್ ನಿರ್ಮಾಣ ಆಗುತ್ತಿದ್ದು, ಕ್ಷೇತ್ರದ ಶಾಸಕ ಮುನಿರತ್ನ ಅವರು ಪರಿಶೀಲಿಸಿದ್ದಾರೆ. ಹಾಗೂ ವಾರ್ಡಿನ ಪಾರ್ಕ್ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಇದೇ ವೇಳೆ ಸಾರ್ವಜನಿಕರ ಕುಂದು ಕೊರತೆ ಆಲಿಸಿದ ಶಾಸಕರು, ಶೀಘ್ರವೇ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ ಪದಾಧಿಕಾರಿಗಳು, ಸ್ಥಳೀಯರು, ಮುಖಂಡರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.