Select Your Language

Notifications

webdunia
webdunia
webdunia
webdunia

ಜಲ ವಿವಾದ: ಸಿಎಂ ನೇತೃತ್ವದಲ್ಲಿ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ

ಕಳಸಾ ಬಂಡೂರಿ
ಬೆಂಗಳೂರು , ಶನಿವಾರ, 2 ಏಪ್ರಿಲ್ 2016 (12:21 IST)
ಕಳಸಾ ಬಂಡೂರಿ ಮತ್ತು ಮಹದಾಯಿ ಯೋಜನೆ ಜಾರಿ ಕುರಿತಂತೆ  ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸರ್ವಪಕ್ಷಗಳ ಸಭೆಯಲ್ಲಿ ಚರ್ಚಿಸಲಾಗುತ್ತಿದೆ.
 
ಸಭೆಯಲ್ಲಿ ಕೇಂದ್ರ ಸಚಿವರಾದ ಅನಂತ್ ಕುಮಾರ್, ಸದಾನಂದ ಗೌಡ, ಜಗದೀಶ್ ಶೆಟ್ಟರ್, ದೇವೇಗೌಡ, ಕುಮಾರಸ್ವಾಮಿ, ಶೋಭಾ ಕರಂದ್ಲಾಜೆ, ವೀರಪ್ಪ ಮೊಯ್ಲಿ, ಪ್ರತಾಪ್ ಸಿಂಹ್, ನಳಿನ್ ಕಟೀಲ್, ಈಶ್ವರಪ್ಪ, ಪ್ರಹ್ಲಾದ್ ಜೋಷಿ, ರಾಜ್ಯ ಸಭಾ ಸದಸ್ಯರು, ಸಂಬಂಧಿತ ಜಿಲ್ಲೆಗಳ ಶಾಸಕರು ಹಾಜರಾಗಿದ್ದಾರೆ.
 
ರೈತ ಮುಖಂಡರು ಮತ್ತು ಹೋರಾಟಗಾರರು ಸಭೆಯಲ್ಲಿ ಪಾಲ್ಗೊಂಡು ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.
 
ಆದರೆ, ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಮತ್ತು ಶಾಸಕ ಶ್ರೀರಾಮುಲು ಗೈರು ಹಾಜರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

Share this Story:

Follow Webdunia kannada