ನಂಜನಗೂಡು ತಾಲೂಕಿನ 28 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಭಾನುವಾರ ಹುರ ಗ್ರಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಲಾನ್ಯಾಸ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ನಂಜನಗೂಡು ತಾಲ್ಲೂಕಿನ ಕಾಡಂಚಿನ 30ಗ್ರಾಮಗಳ ಪಕ್ಕದಲ್ಲೇ ನದಿ ಹರಿಯುತ್ತದ್ದರೂ ಕುಡಿಯಲು ನೀರಿಲ್ಲದೆ ತೊಂದರೆ ಅನುಭವಿಸಿವೆ. ಈ ಭಾಗ ಪ್ರತಿನಿಧಿಸಿದ ಯಾರೂ ಇದನ್ನು ನನ್ನ ಗಮನಕ್ಕೆ ತಂದಿರಲಿಲ್ಲ. ನಮ್ಮ ಸರ್ಕಾರ ಬಂದು ಮೂರುವರೆ ವರ್ಷ ಆಯಿತು. ಮೊದಲೇ ನನ್ನ ಗಮನಕ್ಕೆ ತಂದಿದ್ದರೆ ಈಗಾಗಲೇ ಕಾಮಗಾರಿ ಮುಗಿಸಿ, ಕೆರೆಗಳಿಗೆ ನೀರು ಕೊಡುತ್ತದ್ದೆವು ಎಂದು ಹೇಳಿದರು.
ಈ ಯೋಜನೆಯೂ ಸೇರಿದಂತೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ 100 ಕೆರೆಗಳಿಗೆ ಕುಡಿಯಲು ನೀರು ತುಂಬಿಸುವ ಯೋಜನೆಯನ್ನು ಕೈಗೊಳ್ಳಲಾಗಿದೆ. ಇನ್ನು ಒಂದು – ಒಂದೂವರೆ ವರ್ಷದಲ್ಲಿ ಎಲ್ಲಾ ಯೋಜನೆಗಳು ಪೂರ್ಣಗೊಳ್ಳಲಿವೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.