Webdunia - Bharat's app for daily news and videos

Install App

ಆಲಮಟ್ಟಿ ಎಡದಂಡೆ ಕಾಲುವೆಗೆ ಇಂದಿನಿಂದ ನೀರು

Webdunia
ಶುಕ್ರವಾರ, 20 ಜುಲೈ 2018 (15:14 IST)
ಆಧುನೀಕರಣ ಕಾಮಗಾರಿ ಪೂರ್ಣಗೊಳ್ಳುವ ಮೊದಲೇ ಮುಂಗಾರು ಹಂಗಾಮಿಗೆ ಆಲಮಟ್ಟಿ ಎಡದಂಡೆ ಕಾಲುವೆಗೆ ಇಂದಿನಿಂದ ನೀರು ಹರಿಯಲು ಆರಂಭಗೊಳ್ಳಲಿದೆ. ಇತ್ತೀಚಿಗೆ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಎಲ್ಲಾ ಕಾಲುವೆಗಳಿಗೆ 17 ಮಧ್ಯರಾತ್ರಿಯಿಂದ ನೀರು ಹರಿಯಬೇಕಿತ್ತು. ಆದರೆ ಆಲಮಟ್ಟಿ ಎಡದಂಡೆ ಕಾಲುವೆಯ ಆಧುನೀಕರಣ ಕಾರ್ಯ ನಡೆದಿದ್ದರಿಂದ, ಅದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಎರಡು ದಿನ ಕಾಲಾವಕಾಶ ಅಗತ್ಯವಿತ್ತು. ಸದ್ಯ ಕಾಲುವೆಯ ಆಧುನೀಕರಣ ಕಾರ್ಯ ಸ್ಥಗಿತಗೊಳಿಸಿ, ನೀರು ಸರಾಗವಾಗಿ ಹರಿಯುವಂತೆ ಅವಕಾಶ ಕಲ್ಪಿಸುವ ಕಾರ್ಯ ಮುಗಿದಿದೆಇಂದಿನಿಂದ  ಕಾಲುವೆಗೆ ನೀರು ಹರಿಸಲಾಗುತ್ತಿದೆ. 

ಆಲಮಟ್ಟಿ ಎಡದಂಡೆ ಕಾಲುವೆಗೆ ನೀರು ಹರಿಸಲಾಗುತ್ತಿದೆ ಎಂದು ಎ.ಎಲ್‌.ಬಿ.ಸಿ ಕಾರ್ಯನಿರ್ವಾಹಕ ಎಂಜಿನಿಯರ್ಸಿ.ಎಂ. ಛಬ್ಬಿ ಹೇಳಿಕೆ ನೀಡಿದ್ದಾರೆ. ಆಲಮಟ್ಟಿ ಎಡದಂಡೆ ಕಾಲುವೆಯಿಂದ 22 ಸಾವಿರ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಆಗುತ್ತದೆ. ಭಾಗದಲ್ಲಿ ಮುಂಗಾರು ಮಳೆ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಬಿದ್ದ ಕಾರಣ, ಇನ್ನೂ ಮುಂಗಾರು ಹಂಗಾಮಿನ ಬಿತ್ತನೆಯೂ ನಡೆದಿಲ್ಲ, ಹೀಗಾಗಿ ಕಾಲುವೆಗೆ ನೀರು ಬೇಕು ಎಂಬ ರೈತರ ಒತ್ತಾಸೆಯಾಗಿತ್ತು.

ಆಧುನೀಕರಣ ಕಾರ್ಯ ಅರ್ಧಕ್ಕೆ ನಿಲ್ಲಿಸಿ ಕಾಲುವೆಗೆ ನೀರು ಹರಿಯಲು ಕ್ರಮ ಕೈಗೊಳ್ಳಲಾಗಿದೆ. ಎಎಲ್ಬಿಸಿ ಕಾಲುವೆಗಳ ಮೊದಲ 12 ಕಿ.ಮೀ ಕಾಲುವೆ ದೊಡ್ಡದಾಗಿದ್ದು, 50 ಕ್ಯುಸೆಕ್ಸ್ನೀರು ಹರಿಯುವ ಸಾಮರ್ಥ್ಯ ಹೊಂದಿದೆ. ನಂತರ ಕಾಲುವೆಯ ಗಾತ್ರ ಚಿಕ್ಕದಾಗಿದ್ದು 20 ಕ್ಯೂಸೆಕ್ಸ್ ನೀರು ಹರಿಯಲಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ
Show comments