Webdunia - Bharat's app for daily news and videos

Install App

ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಕಾದರೆ ಮನೆಯಿಂದಲೇ ನೀರು ತರಬೇಕು...!

Webdunia
ಬುಧವಾರ, 17 ಅಕ್ಟೋಬರ್ 2018 (18:21 IST)
ಬರಪೀಡಿತ ಪ್ರದೇಶ ಗಡಿನಾಡಿನಲ್ಲಿರುವ ಸರ್ಕಾರಿ ಆಸ್ಪತ್ರೆಯ ಡಯಾಲಿಸಿಸ್ ಕೇಂದ್ರದಲ್ಲಿ ನೀರಿಲ್ಲದೆ ರೋಗಿಗಳು ಪರದಾಡುವಂತಾಗಿದೆ.

ಪಾವಗಡದಲ್ಲಿ ಡಯಾಲಿಸಿಸ್ ಗಾಗಿ ರೋಗಿಗಳು ದುಬಾರಿ ವೆಚ್ಚ ಮಾಡಿ 100 ಕಿ. ಮೀ ದೂರ ಇರುವ ತುಮಕೂರು ಜಿಲ್ಲಾಸ್ಪತ್ರೆ ಅಥವಾ ಪಕ್ಕದ ಆಂದ್ರಕ್ಕೆ ಹೊಗಬೇಕಾದ ಅನಿರ್ವಾತೆ ಎದುರಾಗಿದೆ. ತುಮಕೂರು‌ ಜಿಲ್ಲೆಯ ಗಡಿ ಭಾಗ ಪಾವಗಡ ತಾಲ್ಲೂಕಿನ  ಜನರ ಅನೂಕೂಲಕ್ಕಾಗಿ ಕಳೆದ ಸರ್ಕಾರ 9 ತಿಂಗಳ ಹಿಂದೆ ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಘಟಕ ಸ್ಥಾಪಿಸಿತು.

ಆದರೆ ಪಾವಗಡ ತಾಲ್ಲೂಕಿನ ನೀರಿನ ಸಮಸ್ಯೆ  ಸರ್ಕಾರಿ ಆಸ್ಪತ್ರೆಯನ್ನು ಆವರಿಸಿದ್ದು ಡಯಾಲಿಸಿಸ್ ಘಟಕಕ್ಕೂ ವ್ಯಾಪಿಸಿದೆ.
ಡಯಾಲಿಸಿಸ್ ಘಟಕಕ್ಕೆ ಪ್ರಮುಖವಾಗಿ ನೀರು, ವಿದ್ಯುತ್ ಅವಶ್ಯಕತೆ ಇದ್ದು ಅದರಲ್ಲೂ ಹೆಚ್ಚಾಗಿ ನೀರಿನ ಅವಶ್ಯಕತೆ ಇದೆ. ದಿನಕ್ಕೆ 8-10 ರೋಗಿಗಳು ಡಯಾಲಿಸಿಸ್ ಮಾಡಿಸಿಕೊಳ್ಳುತ್ತಾರೆ. ಒಬ್ಬ ರೋಗಿಗೆ ಡಯಾಲಿಸಿಸ್ ಮಾಡಲು 120 ಲೀಟರ್ ನೀರು ಖರ್ಚಾಗುತ್ತದೆ. ಹೀಗಾಗಿ ದಿನಕ್ಕೆ ಒಂದು ಸಾವಿರಕ್ಕೂ ಹೆಚ್ಚು ಲೀಟರ್ ನಷ್ಟು ನೀರು ಡಯಾಲಿಸಿಸ್ ಘಟಕಕ್ಕೆ ಅವಶ್ಯಕತೆ ಇದೆ.

ಆಸ್ಪತ್ರೆಗೆ ಪುರಸಭೆ ನೀರು ಪೂರೈಕೆ ಮಾಡುತ್ತಿದ್ದು ಇದು ಆಸ್ಪತ್ರೆ ನಿರ್ವಹಣೆಗೆ ಸಾಕಾಗುತ್ತಿಲ್ಲ. ಇದರಿಂದ ಡಯಾಲಿಸಿಸ್ ರೋಗಿಗಳಿಗೆ ಹೆಚ್ಚಿನ ಸಮಸ್ಯೆಯಾಗುತ್ತಿದೆ. ಸುಸಜ್ಜಿತವಾದ ಡಯಾಲಿಸಿಸ್ ಕೇಂದ್ರವಿದ್ರೂ ನೀರಿಲ್ಲದೆ ರೋಗಿಗಳು ಚಿಕಿತ್ಸೆಯಿಂದ ವಂಚಿತರಾಗುತ್ತಿದ್ದಾರೆ. ಕೆಲವು ರೋಗಿಗಳು ಮನೆಯಿಂದಲೇ ನೀರು ತಂದು ಡಯಾಲಿಸಿಸ್ ಮಾಡಿಸಿಕೊಳ್ಳುತ್ತಾರಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆ.1ರಂದು ಧರ್ಮಸ್ಥಳ ಚಲೋ, ಬೃಹತ್ ಸಮಾವೇಶ:ವಿಜಯೇಂದ್ರ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಮುಂದಿನ ಸುದ್ದಿ
Show comments