ಇಂದಿರಾ ಕ್ಯಾಂಟೀನ್ನಲ್ಲಿ ನೀರಿನ ಸಮಸ್ಯೆ ಆಯ್ತು ಈಗ ಆಹಾರ ಸಮಸ್ಯೆ,

Webdunia
ಶನಿವಾರ, 4 ಫೆಬ್ರವರಿ 2023 (14:11 IST)
ಇಂದಿರಾ ಕ್ಯಾಂಟೀನ್ನಲ್ಲಿ ನೀರಿನ ಸಮಸ್ಯೆ ಆಯ್ತು ಈಗ ಆಹಾರ ಸಮಸ್ಯೆ ಎದುರಾಗಿದೆ.ಇಡ್ಲಿ, ಸಾಂಬಾರ್, ಪಲಾವ್, ಮೊಸರನ್ನ, ಚಟ್ನಿ, ಪಾಯಸ ಪೂರೈಕೆ ಸ್ಥಗಿತವಾಗಲಿದೆ.ಕ್ಯಾಂಟೀನ್ ಯೋಜನೆ ನಿರ್ವಹಣೆಯಲ್ಲಿ ಬಿಬಿಎಂಪಿ ಹಿಂದೇಟು ಹಾಕಿದೆ.ಗುತ್ತಿಗೆದಾರರಿಗೆ ಹಣ ಪಾವತಿ ಮಾಡದ ಕಾರಣ ಕೆಲ ಆಹಾರ ಪೂರೈಕೆ ಸ್ಥಗಿತವಾಗಲಿದೆ.
 
ಮೊದಲು ಬೆಳಗ್ಗೆ ತಿಂಡಿಗೆ ಇಡ್ಲಿ, ಸಾಂಬಾರ್ ಪೂರೈಕೆ ಆಗುತ್ತಿತ್ತು.ಮಧ್ಯಾಹ್ನ ಅನ್ನ ಸಾಂಬಾರ್, ಮೊಸರನ್ನ, ಪಲಾವ್ ಕೊಡಲಾಗುತ್ತಿತ್ತು.ಇಡ್ಲಿ, ಸಾಂಬಾರ್, ಚಟ್ನಿ ಜೊತೆಗೆ ಮಧ್ಯಾಹ್ನ ಮೊಸರನ್ನ, ಪಲಾವ್ ಮತ್ತು ಪಾಯಸವೂ ಸ್ಥಗಿತವಾಗಲಿದೆ.ಆದರೆ ಈಗ ಕ್ಯಾಂಟೀನ್ ನಲ್ಲಿ   4-5 ಆಹಾರಗಳು ಸ್ಥಗಿತವಾಗಿದೆ.ಬೆಳಗ್ಗೆ ರೈಸ್ ಬಾತ್, ಮಧ್ಯಾಹ್ನ ಅನ್ನ ಸಾಂಬಾರ್ ಮಾತ್ರ ಪೂರೈಕೆ ಆಗಲಿದೆ.ವಿಧ ವಿಧವಾದ ಆಹಾರ ಪೂರೈಕೆ ಸ್ಥಗಿತದ ಬಗ್ಗೆ ಗ್ರಾಹಕರಿಂದ  ಬೇಸರ  ವ್ಯಕ್ತವಾಗಿದೆ.ಸರಿಯಾದ ನಿರ್ವಹಣೆ ಇಲ್ಲದೇ ಮುಚ್ಚಿ ಹೋಗುವ ಸಾಧ್ಯತೆ ಎದುರಾಗಿದೆ.ಸರ್ಕಾರ ಮತ್ತು ಬಿಬಿಎಂಪಿ ಬಿಲ್ಗಳನ್ನು ಪಾವತಿ ಮಾಡಿ ಆಹಾರ ಪೂರೈಕೆ ಮಾಡುತ್ತಾ ಇಲ್ವಾ ಎಂಬ ಪ್ರಶ್ನೆ ನಿರ್ಮಾಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments