ನೀರು ಹಂಚಿಕೆ: ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ ಶಾಸಕ

Webdunia
ಬುಧವಾರ, 26 ಡಿಸೆಂಬರ್ 2018 (17:11 IST)
ಹೇಮಾವತಿ ನೀರು ಹಂಚಿಕೆ ಯಲ್ಲಿ ತಾರತಮ್ಯ ಮಾಡಲಾಗಿದೆ ಎಂಬ ಬಿಜೆಪಿ ಶಾಸಕರ ಆರೋಪಕ್ಕೆ ಶಾಸಕರೊಬ್ಬರು ತಿರುಗೇಟು ನೀಡಿದ್ದಾರೆ.

ತುಮಕೂರಿನಲ್ಲಿ ಗ್ರಾಮಾಂತರ ಶಾಸಕ ಡಿ.ಸಿ. ಗೌರಿಶಂಕರ್ ಹೇಳಿಕೆ ನೀಡಿದ್ದು, ಜಿಲ್ಲೆಯ ಮೂವರು ಬಿಜೆಪಿ ಶಾಸಕರನ್ನು ಖುದ್ದಾಗಿ ನಾನೇ ಸಿಎಂಗೆ ಭೇಟಿ ಮಾಡಿಸಿದ್ದೇನೆ.

ತುಮಕೂರು ನಗರ ಶಾಸಕ  ಜ್ಯೋತಿಗಣೇಶ್, ತಿಪಟೂರು ಶಾಸಕ ಬಿ.ಸಿ. ನಾಗೇಶ್, ತುರುವೆಕರೆ ಶಾಸಕ ಮಸಾಲೆ ಜಯರಾಮ್ ರನ್ನ ಭೇಟಿ ಮಾಡಿಸಿದ್ದೇನೆ.

ಹೇಮಾವತಿ ನೀರು ಹರಿಸುವ  ವಿಚಾರವಾಗಿ ಕುಮಾರಣ್ಣನ ಬಳಿ ಮಾತನಾಡಿಸಿದ್ದೇನೆ. ಅಧಿವೇಶನ ಮುಗಿದ ಬಳಿಕ ತೆರಳಿ ಕರೆದುಕೊಂಡು ಹೋಗಿ ಮಾತನಾಡಿಸಿದ್ದೆ. ಒಂದು ತಿಂಗಳಿಂದ ಹೇಮಾವತಿ ನೀರು ನಿಲ್ಲಿಸಿದ್ದಾರೆ ಅಂತಾ ಕೇಳಿದ್ರು. ಅದಕ್ಕೆ ಕುಮಾರಣ್ಣನೇ  ಪ್ರಶ್ನೆ ಕೇಳಿದ್ರು. ಕೆ ಆರ್ ಎಸ್ ನಲ್ಲಿ‌ ನೀರಿದೆ. ಹೇಮಾವತಿ ನೀರು ಏನಾಯ್ತು ಅಂತಾ
ನಮಗೆ ಅದರ ಮಾಹಿತಿ ಇಲ್ಲಾ. ಜನರಿಗೆ ಉತ್ತರ ನೀಡಲು ಆಗುತ್ತಿಲ್ಲವೆಂದು ಹೇಳಿದೆ.

ಎರಡು ದಿನ ಟೈಂ ಕೊಡು ಬ್ರದರ್ ನಾನೆ  ನೀರಿನ ಸಮಸ್ಯೆ ಬಗೆ ಹರಿಸಿಕೊಡುತ್ತೇನೆ ಎಂದು ಪ್ರಾಮೀಸ್ ಮಾಡಿದ್ರು.
ಅದರಂತೆ ಅಧಿವೇಶನ ಮುಗಿದ ಬಳಿಕ ಎರಡು ದಿನದಲ್ಲಿ ನೀರು ಹರಿಸಿದ್ದಾರೆ ಎಂದರು.

ಸಿಎಂ ಕುಮಾರಸ್ವಾಮಿ, ಸಚಿವ ರೇವಣ್ಣ ತಾರತಮ್ಯ ಮಾಡುತ್ತಿದ್ದಾರೆ ಎಂದಿದ್ದ ಜಿಲ್ಲೆಯ ಬಿಜೆಪಿ ಶಾಸಕರ ಹೇಳಿಕೆಗೆ ಡಿ.ಸಿ.ಗೌರಿಶಂಕರ್ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬೆಂಗಳೂರು ಮಳೆಗೆ ರಸ್ತೆ ದಾಟಲು ಕಷ್ಟಪಡುತ್ತಿದ್ದ ವಿಕಲಚೇತನನ್ನು ನೋಡಿ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಪ್ರಾಣ ಪಣಕ್ಕಿಟ್ಟು ಮಗುವನ್ನು ವಿದ್ಯುತ್ ಆಘಾತದಿಂದ ಕಾಪಾಡಿದ ಶ್ವಾನ: ವಿಡಿಯೋ ವೈರಲ್

ಕರ್ನಾಟಕ ಸಿಎಂ ಬದಲಾವಣೆಗೆ ಹೊರಟ ಕಾಂಗ್ರೆಸ್ ಹೈಕಮಾಂಡ್ ಗೆ ಎದುರಾಗಿದೆ ದೊಡ್ಡ ಶಾಕ್

ಡಿಕೆ ಶಿವಕುಮಾರ್ ಪ್ರಮಾಣ ವಚನ ದಿನ ಫಿಕ್ಸ್: ಈ ದಿನಕ್ಕಿದೆ ವಿಶೇಷ

ಮುಂದಿನ ಸುದ್ದಿ
Show comments