ಪ್ರವಾಹ ಸಂತ್ರಸ್ಥರಿಗೆ ಹಾಲಿನ ಪ್ಯಾಕೆಟ್ ನಲ್ಲಿ ನೀರು ಪೂರೈಕೆ

Webdunia
ಶನಿವಾರ, 10 ಆಗಸ್ಟ್ 2019 (17:29 IST)
ಪ್ರವಾಹದಲ್ಲಿ ಸಿಲುಕಿಕೊಂಡಿರೋ ಜನರಿಗೆ ಹಾಗೂ ನೆರೆ ಸಂತ್ರಸ್ಥರಿಗೆ ಹಾಲಿನ ಪ್ಯಾಕೆಟ್ ನಲ್ಲಿ ನೀರು ಪೂರೈಕೆ ಮಾಡಲಾಗುತ್ತಿದೆ.

ಪ್ರವಾಹದಲ್ಲಿ ಸಿಲುಕಿಕೊಂಡಿರುವ ಜನರಿಗೆ ಆಹಾರ ಪೊಟ್ಟಣಗಳ ಜತೆ ಬಾಟಲ್ ಗಳ ಬದಲಿಗೆ ನಂದಿನಿ ಹಾಲಿನ ಖಾಲಿ ಪ್ಯಾಕೆಟ್ ಗಳಲ್ಲಿ ಕುಡಿಯುವ ಶುದ್ಧ ನೀರು ತುಂಬಿಸಿ ಒದಗಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ.

ಹೆಲಿಕಾಪ್ಟರ್ ಮೂಲಕ ಆಹಾರ ಪೊಟ್ಟಣಗಳ ಜತೆ ನೀರಿನ ಬಾಟಲ್ ಗಳನ್ನು ವಿತರಿಸಲಾಗುತ್ತಿತ್ತು. ಬಾಟಲ್ ಭಾರವಾಗಿರುವುದರಿಂದ ಮೇಲಿನಿಂದ ಎಸೆದಾಗ ಜನರಿಗೆ ಗಾಯಗಳಾಗುವ ಸಾಧ್ಯತೆಗಳು ಕಂಡುಬಂದಿವೆ. ಬಾಟಲ್ ಗಳ ಬದಲು ಪ್ಯಾಕೆಟ್ ಗಳಲ್ಲಿ ನೀರು ಪೂರೈಸಲಾಗುತ್ತಿದೆ ಎಂದಿದ್ದಾರೆ.

ಪ್ರವಾಹದಲ್ಲಿ ಸಿಲುಕಿರುವ ಜನರಿಗೆ ತುರ್ತಾಗಿ ಕುಡಿಯುವ ನೀರು ಪೂರೈಸುವ ಅಗತ್ಯವಿದೆ. ಆದ್ದರಿಂದ ಈಗಾಗಲೇ ಲಭ್ಯವಿರುವ ನಂದಿನಿ ಹಾಲಿನ ಖಾಲಿ ಪ್ಯಾಕೆಟ್ ಗಳಲ್ಲಿ ಶುದ್ಧ ನೀರನ್ನು ತುಂಬಿಸಿ ಹೆಲಿಕಾಪ್ಟರ್ ಮೂಲಕ ನೀಡಲಾಗುತ್ತಿದೆ.

ನಂದಿನಿ ಹಾಲಿನ ಪ್ಯಾಕೆಟ್ ಗಳಲ್ಲಿ ನೀರು ತುಂಬಿಸಿಕೊಡುತ್ತಿರುವ ಬಗ್ಗೆ ತಪ್ಪು ಮಾಹಿತಿ ಹೋಗದಿರಲಿ ಎಂಬ ಕಾರಣಕ್ಕೆ ಈ ವಿಷಯ ಸ್ಪಷ್ಟಪಡಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಮಗನೇ ಚಿನ್ನ ಕದ್ದಿದ್ದು ಎಂದಿದ್ದಕ್ಕೆ ಜೀವನೇ ತೆಗೆದ್ಬಿಟ್ಟ

ಇವರಿಗಿಂತ, ಇಂದಿರಾ ಗಾಂಧಿಗೆ ಧೈರ್ಯ ಜಾಸ್ತಿಯಾಗಿತ್ತು: ರಾಹುಲ್ ಗಾಂಧಿ ಕಿಡಿ

ಮಗಳ ಶವ ಮುಂದಿಟ್ಟು ಲಂಚಕ್ಕೆ ಬೇಡಿಕೆ: ತಂದೆಯ ಭಾವುಕ ಪೋಸ್ಟ್ ಬೆನ್ನಲ್ಲೇ ಪೊಲೀಸರಿಗೆ ಶಾಕ್‌

ಡೆಹ್ರಾಡೂನ್‌ನಲ್ಲಿ ಮೂರು ಆಭರಣ ಬಿಟ್ಟು ಬೇರೆ ಧರಿಸಿದ್ರೆ ಬೀಳುತ್ತೆ ₹50ಸಾವಿರ ದಂಡ

ಬಿಜೆಪಿ ಶಾಸಕ ರವಿಕುಮಾರ್ ಸಿಎಂ ಕಾರಿನಲ್ಲಿ ಇದ್ದಿದ್ದು ಯಾಕೆ: ನಿಜ ಕಾರಣ ಬಯಲು

ಮುಂದಿನ ಸುದ್ದಿ
Show comments