Webdunia - Bharat's app for daily news and videos

Install App

ನಮ್ಮಗೂ ಬೆದರಿಕೆ ಇ-ಮೇಲ್ ಬಂದಿದೆ-ಪರಮೇಶ್ವರ್

geetha
ಬುಧವಾರ, 6 ಮಾರ್ಚ್ 2024 (20:14 IST)
ಬೆಂಗಳೂರು-ಬೆಂಗಳೂರಿನಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೂ ಕೂಡ ಇ-ಮೇಲ್ ನಲ್ಲಿ ಬೆದರಿಕೆ ಸಂದೇಶ ಬಂದಿದೆ. ಈ ಹಿಂದೆ ಬೆಂಗಳೂರಿನ ಹಲವು ಶಾಲೆಗಳಿಗೆ ಬೆದರಿಕೆ ಮೇಲೆ ಸಂದೇಶ ಬಂದಿತ್ತು. ಇಂತಹ ಕೇಸ್ ಗಳನ್ನು ಭೇದಿಸುವುದಕ್ಕೆ ಸ್ವಲ್ಪ ಕಷ್ಟ ಆಗುತ್ತದೆ ಎಂದರು. ಬೇರೆ ದೇಶದ ಏಜೆನ್ಸಿಗಳು ಸಪೋರ್ಟ್ ಮಾಡುತ್ತಿಲ್ಲ. ಫೇಸ್ಬುಕ್, ಗೂಗಲ್ ಅಂತ ಕಂಪನಿಗಳು ಸಹಕರಿಸುವುದಿಲ್ಲ. ಅಂತಹ ಕಂಪನಿ ಸಹಕರಿಸಿದರೆ ಸುಲಭವಾಗಿ ಕೇಸ್ ಅನ್ನು ಭೇದಿಸಬಹುದು ಎಂದು ಹೇಳಿದ್ದಾರೆ.

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಕಡಿಮೆ ತೀವ್ರತೆಯ ಸ್ಫೋಟಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಈಗ ಮಹತ್ವದ ಸುಳಿವು ಸಿಕ್ಕಿದ್ದು, ಶೀಘ್ರದಲ್ಲೇ ಪ್ರಕರಣವನ್ನು ಭೇದಿಸುತ್ತಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಅವರು ಬುಧವಾರ ಹೇಳಿದ್ದಾರೆ.ಕಳೆದ ಎರಡು ದಿನಗಳಲ್ಲಿ ಪೊಲೀಸರಿಗೆ ಕೆಲವು ಮಹತ್ವದ ಸುಳಿವು ಸಿಕ್ಕಿದ್ದು, ಅವು ಪ್ರಕರಣ ಭೇದಿಸುವ ಭರವಸೆ ಮೂಡಿಸಿವೆ ಎಂದು ಪರಮೇಶ್ವರ್ ಅವರು ಇಂದು ನಗರದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
 
ನಮ್ಮ ಅಧಿಕಾರಿಗಳು ಶೀಘ್ರದಲ್ಲೇ ಪ್ರಕರಣ ಭೇದಿಸುತ್ತಾರೆ. ನಿನ್ನೆ ಮತ್ತು ಹಿಂದಿನ ದಿನ ಕೆಲವು ಪ್ರಮುಖ ಮಾಹಿತಿಗಳನ್ನು ಸ್ವೀಕರಿಸಲಾಗಿದೆ. ಅದನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಇದೇ ರೀತಿ ಮುಂದುವರಿದರೆ ತನಿಖೆ ಪೂರ್ಣಗೊಳಿಸುತ್ತೇವೆ ಎಂದು ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments