Webdunia - Bharat's app for daily news and videos

Install App

ನಾವು ಬಿಕ್ಷುಕರಲ್ಲಾ ನಮ್ಮ ಮೀಸಲಾತಿ ನಮಗೆ ಕೊಡಿ ಡಿಕೆಶಿ ಆಕ್ರೋಶ..!

Webdunia
ಭಾನುವಾರ, 26 ಮಾರ್ಚ್ 2023 (19:58 IST)
ಚುನಾವಣೆ ಹತ್ತಿರವಾಗ್ತಿದ್ದಂತೆ ಮೀಸಲಾತಿ ವಿಚಾರ ಸಾಕಷ್ಟು ಕಾವು ಪಡೆಯುತ್ತಿದೆ.‌ಮೀಸಲಾತಿ ವಿಚಾರವಾಗಿ ಬಿಜೆಪಿ ಸರ್ಕಾರ ತೆಗೆದಕೊಂಡಿರುವ ನಿರ್ಧಾರಕ್ಕೆ ಬಿಜೆಪಿ ಸರ್ಕಾರ ನಾಟಕವಾಡ್ತಿದೆ ಅಂತ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದ್ರು..ಮೀಸಲಾತಿ ವಿಚಾರವಾಗಿ ಬಿಜೆಪಿ ಸರ್ಕಾರ ರಾಜ್ಯದ ಜನರಿಗೆ ಅನ್ಯಾಯ ಮಾಡ್ತಿದೆ ಅಂತಾ ಇವತ್ತು ಕೈ ಪಡೆಯ ನಾಯಕರು ಜಂಟಿಸುದ್ದಿಗೋಷ್ಟಿ ನಡೆಸಿದ್ರು. ಚುನಾವಣೆ ಹತ್ತಿರ ಬರ್ತಿದ್ದಂತೆ ನಾಯಕರ ಆರೋಪ ಪ್ರತ್ಯಾರೋಪಗಳು ಹೆಚ್ಚಾಗ್ತಿವಿ. ಅದ್ರಲ್ಲೂ ಮೀಸಲಾತಿ ವಿಚಾರದಲ್ಲಿ ಆಢಳಿತ ಪಕ್ಷ ಹಾಗೂ  ವಿಪಕ್ಷಗಳ ನಡುವೆ ಹಗ್ಗಜಗ್ಗಟ ಹೆಚ್ಚಾಗ್ತನೆ ಇದೆ. ಮೀಸಲಾತಿ ವಿಚಾರದಲ್ಲಿ ಸರ್ಕಾರ ತೆಗೆದುಕೊಂಡ ನಿರ್ಧಾರಕ್ಕೆ ಕಾಂಗ್ರೆಸ್ ನಾಯಕರು ಸರ್ಕಾರದ ವಿರುದ್ದ ಕಿಡಿಕಾರುತ್ತಿದ್ದಾರೆ. ಮೀಸಲಾತಿ ವಿಚಾರವಾಗಿ ಕೈ ನಾಯಕರು ಇಂದು ಜಂಟಿಸುದ್ದಿಗೋಷ್ಟಿ ನಡೆಸಿ ಸರ್ಕಾರದ ವಿರುದ್ದ ಹರಿಹಾಯ್ದರು

ಸರ್ಕಾರದ ನಿರ್ಧಾರದ ವಿರುದ್ದ ಕಿಡಿಕಾರಿದ ಡಿಕೆಶಿ  ಹಿಂದುಳಿದವರು, ಅಲ್ಪಸಂಖ್ಯಾತರು, ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ ಪಂಗಡದವರು  ಭಿಕ್ಷುಕರಲ್ಲ. ಪ್ರತಿಯೊಬ್ಬರು ಅವರ  ಹಕ್ಕನ್ನ ಜನಸಂಖ್ಯೆಗಳಿಗೆ ಅನುಗುಣವಾಗಿ ಕೇಳುತ್ತಿದ್ದಾರೆ.  ನಾಗಮೋಹನ್ ದಾಸ್ ಅವರ ಸಮಿತಿಯು ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಲು ಶಿಫಾರಸ್ಸು ಮಾಡಿದೆ. ಈ ವರದಿಯನ್ನು ನಾಲ್ಕು ವರ್ಷಗಳ ಕಾಲ ಜಾರಿ ಮಾಡದೇ, ನಾವು ಧ್ವನಿ ಎತ್ತಿದ ನಂತರ ಹೆಚ್ಚಳ ಮಾಡುವ ಕಾನೂನು ಮಾಡಿ ಇದನ್ನು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಿಲ್ಲ. ಇದರ ಬಗ್ಗೆ ನಾವು ಹೋರಾಟಕ್ಕೆ ಮುಂದಾದ ನಂತರ ಅವರು ಕೇಂದ್ರಕ್ಕೆ ಪತ್ರ ಬರೆಯುವ ನಾಟಕವಾಡಿದ್ದಾರೆ. ಇನ್ನೂ ಮೃತ್ಯುಂಜಯ ಸ್ವಾಮೀಜಿಗಳು, ನಿರ್ಮಲಾನಂದ ಸ್ವಾಮೀಜಿಗಳಿಗೆ ಸರ್ಕಾರದವರು 20-25 ಬಾರಿ ಕರೆ ಮಾಡಿ ಇದನ್ನು ಒಪ್ಪಿಕೊಳ್ಳಿ ಎಂದು ಕೇಳುತ್ತಿದ್ದಾರೆ ಅಂತ ಡಿಕೆಶಿ ಸರ್ಕಾರದ ವಿರುದ್ದ ಆರೋಪ ಮಾಡಿದ್ರು
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಅಹಮದಾಬಾದ್ ವಿಮಾನ ದುರಂತ ಆಯ್ತು ಅಂತ ನಾವೇನು ಮೋದಿ ರಾಜೀನಾಮೆ ಕೇಳಿದ್ವಾ

ಮುಂದಿನ ಸುದ್ದಿ
Show comments