Select Your Language

Notifications

webdunia
webdunia
webdunia
webdunia

ಮೋದಿಯವರಂಥ ನಾಯಕ ಸಿಕ್ಕಿರೋದು ನಮ್ಮ ಸೌಭಾಗ್ಯ : ಯಡಿಯೂರಪ್ಪ

ಮೋದಿಯವರಂಥ ನಾಯಕ ಸಿಕ್ಕಿರೋದು ನಮ್ಮ ಸೌಭಾಗ್ಯ : ಯಡಿಯೂರಪ್ಪ
ಬೆಂಗಳೂರು , ಸೋಮವಾರ, 8 ಮೇ 2023 (14:14 IST)
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಯವರಂಥ ನಾಯಕ ಸಿಕ್ಕಿರೋದು ನಮ್ಮ ಸೌಭಾಗ್ಯ. ಕೊರೊನಾ ಸಂದರ್ಭದಲ್ಲಿ ಪರಿಹಾರ ನೀಡಿದ್ದಾರೆ, ಆರೋಗ್ಯ ರಕ್ಷಿಸಿ ದೇಶ ರಕ್ಷಿಸಿದ್ದಾರೆ.
 
ದೇಶವು ಆರ್ಥಿಕ ಪ್ರಗತಿ ಆಗಿದೆ, ಜಗತ್ತಿನಲ್ಲೇ ನಮ್ಮ ದೇಶ ಆರ್ಥಿಕತೆಯಲ್ಲಿ ಐದನೇ ಸ್ಥಾನದಲ್ಲಿದೆ. ಮುಂದೆ ಒಂದನೇ ಸ್ಥಾನದಲ್ಲಿ ಬರೋದ್ರಲ್ಲಿ ಸಂಶಯ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದರು.

ಖಾಸಗಿ ಹೊಟೇಲಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರದ ಅಗತ್ಯ ಇದೆ. ಮೋದಿಯವರಂಥ ಮುತ್ಸದ್ಧಿ ಪ್ರಧಾನಿ ನಾಯಕ ಈದೇಶದ ಅಭಿವೃದ್ಧಿ ಬಗ್ಗೆ ಹಗಲಿರುಳು ಚಿಂತೆ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಮೋದಿ, ಅಮಿತ್ ಶಾ, ನಡ್ಡಾ ಅವರು ವಿಶೇಷ ಪ್ರಯತ್ನ ಮಾಡುತ್ತಿದ್ದಾರೆ. ವಿದೇಶದಿಂದ ಬಂದ ನಂತರ ವಿಶ್ರಾಂತಿ ಇಲ್ಲದೇ ಮೋದಿಯವರು ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

ಜಾತಿ ಧರ್ಮದ ಎಲ್ಲೆ ಮೀರಿ ಬಸವತತ್ವದಂತೆ ಮೋದಿ ಆಡಳಿತ ಇದೆ. ಅವರ ಹೆಜ್ಜೆಗೆ ಹೆಜ್ಜೆ ಹಾಕುವ ಸರ್ಕಾರ ಕರ್ನಾಟಕದಲ್ಲಿ ಬೇಕಾಗಿದೆ. ರಾಜ್ಯದ ಅಭಿವೃದ್ಧಿ ಮುಖ್ಯ, ರೈತರು, ಮಕ್ಕಳು, ಮಹಿಳೆಯರು, ದುರ್ಬಲ ಸಬಲೀಕರಣಕ್ಕೆ ಮೋದಿಯವರ ಕೈ ಬಲಪಡಿಸಬೇಕಿದೆ. ರಾಜ್ಯದಲ್ಲಿ ಸಮಗ್ರ ಅಭಿವೃದ್ಧಿ ಆಗುತ್ತಿದೆ. ಮನೆಮನೆಗೂ ಶುದ್ಧ ಕುಡಿಯುವ ನೀರು, ಶೌಚಾಲಯಗಳ ನಿರ್ಮಾಣ ಆಗಿದೆ ಎಂದರು. 

ಮೋದಿ, ಅಮಿತ್ ಶಾ , ನಡ್ಡಾ ರಾಜ್ಯದ ಉದ್ದಗಲ ಓಡಾಡಿದ್ದಾರೆ. ಪ್ರಧಾನಿಯವರು ರೋಡ್ ಶೋ ಮಾಡಿದ್ದಾರೆ. ರಾಜ್ಯದ ನಾಡಿಮಿಡಿತ ಅರ್ಥ ಮಾಡಿಕೊಂಡಿದ್ದಾರೆ. ಈ ಸಲ 130-135 ಸೀಟ್ ಗೆಲ್ಲೋದು ನಿಶ್ಚಿತ. 2008 ರಲ್ಲಿ 110, 2018 ರಲ್ಲಿ 104 ಗೆದ್ದಿದ್ದೇವೆ. ಸೂರ್ಯ ಚಂದ್ರರಷ್ಟೇ ಸತ್ಯ ನಾವು ಅಧಿಕಾರಕ್ಕೆ ಬರೋದು. ಮೀಸಲಾತಿ ಹೆಚ್ಚಳ ಮಾಡಿದ್ದೇವೆ. 80% ಭಾಗ ಎಸ್ಸಿ, ಎಸ್ಟಿ ಸಮುದಾಯದವರು ಬಿಜೆಪಿ ಬೆಂಬಲಿಸುತ್ತಾರೆ ಎಂದು ತಿಳಿಸಿದರು.

 

Share this Story:

Follow Webdunia kannada

ಮುಂದಿನ ಸುದ್ದಿ

ಆನೆ ಬಲರಾಮ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ