Webdunia - Bharat's app for daily news and videos

Install App

ನಾವು ಯಾರನ್ನೂ ರಕ್ಷಿಸುತ್ತಿಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ

Webdunia
ಭಾನುವಾರ, 14 ನವೆಂಬರ್ 2021 (20:49 IST)
ಬೆಂಗಳೂರು: ರಾಜ್ಯ ಸರ್ಕಾರ ಯಾವುದೇ ನಾಯಕನೂ ಕೂಡ ಬಿಟ್ ಕಾಯಿನ್ ಹಗರಣದಲ್ಲಿ ಭಾಗಿಯಾಗಿಲ್ಲ. ನಾವು ಯಾರನ್ನೂ ರಕ್ಷಣೆ ಮಾಡುತ್ತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗುಜರಾತ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿರುವ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರ ಸನ್ಮಾನ ಕಾರ್ಯಕ್ರಮದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಬಿಟ್ ಕಾಯಿನ್ ಹಗರಣದ ಕುರಿತು ಪ್ರಸ್ತಾಪ ಮಾಡುತ್ತಿರುವವರು ವಾಸ್ತವವಾಗಿ ಹಗರಣ ಏನೆಂದು ನಿಖರವಾಗಿ ತಿಳಿಸಲಿ. ಇದನ್ನು ಸಾಬೀತು ಪಡಿಸುವ ದಾಖಲೆಗಳನ್ನು ಈಗಾಗಲೇ ಪ್ರಕರಣ ತನಿಖೆ ನಡೆಸುತ್ತಿರುವ ತನಿಖಾ ಸಂಸ್ಥೆಗಳಿಗೆ ಹಸ್ತಾಂತರಿಸಿ, ಆರೋಪಗಳನ್ನು ಸಾಬೀತು ಪಡಿಸಲಿ. ಸರ್ಕಾರದ ಯಾವುದೇ ನಾಯಕರೂ ಕೂಡ ಹಗರಣದಲ್ಲಿ ಭಾಗಿಯಾಗಿಲ್ಲ. ನಮ್ಮ ಸರ್ಕಾರ ಯಾರನ್ನೂ ರಕ್ಷಣೆ ಮಾಡುತ್ತಿಲ್ಲ ಎಂದು ಹೇಳಿದ್ದಾರೆ.
ಪ್ರತಿದಿನ ಈ ವಿಷಯದ ಕುರಿತು ಪ್ರತಿಕ್ರಿಯೆ ನೀಡಬಯಸುವುದಿಲ್ಲ. ಈ ಕುರಿತು ಆರೋಪಗಳನ್ನು ಮಾಡುತ್ತಿರುವವರು ಹಗರಣ ಏನು ಹಾಗೂ ಇದರಲ್ಲಿ ಯಾರು ಭಾಗಿಯಾಗಿದ್ದಾರೆ ಎಂದು ತಿಳಿಸಲಿ. ಈಗಾಗಲೇ 8-9 ತಿಂಗಳ ಹಿಂದೆಯೇ ಪ್ರಕರಣವನ್ನು ಇಡಿಗೆ ಹಸ್ತಾಂತರಿಸಲಾಗಿದೆ. ಅಂತರಾಷ್ಟ್ರೀಯ ವಿಷಯವಾಗಿರುವುದರಿಂದ ಸಿಬಿಐನ ಇಂಟರ್ ಪೋಲ್ ವಿಭಾಗಕ್ಕೂ ಮಾಹಿತಿ ನೀಡಲಾಗಿದೆ. ಈ ಹಗರಣದ ಮೊತ್ತದ ಬಗ್ಗೆ ವಿಭಿನ್ನ ಹೇಳಿಕೆಗಳು ಬರುತ್ತಿವೆ. ಇದಕ್ಕೆ ಯಾವುದೇ ದಾಖಲೆಗಳ ಆಧಾರವಿಲ್ಲ. ಇದರಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೂ ಇಲ್ಲ. ನಾವು ಯಾರೂ ಭಾಗಿಯಾಲ್ಲ ಎಂದರು.
ಮುಖ್ಯಮಂತ್ರಿ ಹುದ್ದೆಗೆ ಸಂಚಕಾರ ಬರಲಿದೆ ಎಂಬ ಪ್ರತಿಪಕ್ಷಗಳ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಇದು ರಾಜಕೀಯ ಪ್ರೇರಿತ ಎಂದಷ್ಟೇ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments