Webdunia - Bharat's app for daily news and videos

Install App

ಮುಂದಿನ ಅನಾಹುತಕ್ಕೆ ನಾವು ಜವಾಬ್ದಾರರಲ್ಲ ಎಂದ ಸಚಿವ!

Webdunia
ಮಂಗಳವಾರ, 29 ಜನವರಿ 2019 (18:15 IST)
ಕೆಲವು ಕಾಂಗ್ರೆಸ್ ಶಾಸಕರು  ಹದ್ದು ಮೀರಿ ನಡೆದುಕೊಳ್ಳುತ್ತಿರುವುದಕ್ಕೆ ಸಿಎಂ ಎಚ್ಡಿಕೆ ನಿನ್ನೆ ಬೇಜಾರಿನಲ್ಲಿ ಸಿಎಂ‌ ಸ್ಥಾನಕ್ಕೆ ರಾಜಿನಾಮೆ ನೀಡಲು ಸಿದ್ಧ ಎಂದು ಮಾತನಾಡಿದ್ದಾರೆ. ಕಾಂಗ್ರೆಸ್ ಪಕ್ಷದವರು ಅವರ ಶಾಸಕರನ್ನ ಹದ್ದುಬಸ್ತುನಲ್ಲಿ ಇಟ್ಟುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಆಗುವ ಅನಾಹುತಕ್ಕೆ ನಾವು ಜವಬ್ದಾರರಲ್ಲ ಎಂದ ಸಚಿವರೊಬ್ಬರು ಎಚ್ಚರಿಕೆ ನೀಡಿದ್ದಾರೆ.

ಮಂಡ್ಯದಲ್ಲಿ ಸಚಿವ ಸಿಎಸ್ ಪುಟ್ಟರಾಜು ಹೇಳಿಕೆ ನೀಡಿದ್ದು,  ಬಿಜೆಪಿ ಜೊತೆಗೆ ಹೋಗುವ ಪ್ರಶ್ನೆಯೇ ಇಲ್ಲ. ಈ ಹಿಂದೆ ಬಿಜೆಪಿಯೊಂದಿಗೆ ನಾವು ಸರ್ಕಾರ ನಡೆಸಿದ್ದಾಗ ಇಡೀ ರಾಜ್ಯ ಮೆಚ್ಚಿತ್ತು. ಕೃಷ್ಣದೇವರಾಯರ ಕಾಲ‌ ಮರುಕಳಿಸಿದೆ ಅನ್ನೋ ರೀತಿಯಲ್ಲಿ ಆಡಳಿತ ಇತ್ತು. ಆದರೆ ಕಾಂಗ್ರೆಸ್ ಶಾಸಕರು ಬೆಳಿಗ್ಗೆ ಎದ್ದರೆ ಬೀದೀಲಿ ಮಾತನಾಡುತ್ತ ನಿಲ್ಲುತ್ತಾರೆ.

ಸಿದ್ದರಾಮಯ್ಯ ಅವರು ರೂಪಿಸಿದ್ದ ಕಾರ್ಯವನ್ನು ಅನುಷ್ಠಾನ ಗೊಳಿಸಲು ಎಚ್ಡಿಕೆ ಕೆಲಸ ಮಾಡ್ತಿದ್ದಾರೆ. ಫೆ.6 ರಂದು  ಮಂಡಿಸುವ ಬಜೆಟ್ ಜನರ ಪರವಾಗಿ, ಜನರ ಮಧ್ಯೆನಿಂತು ಕೆಲಸ ಮಾಡುವ ಬಜೆಟ್ ಆಗಲಿದೆ ಎಂದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments