Select Your Language

Notifications

webdunia
webdunia
webdunia
webdunia

ಯಾವುದೇ ರೀತಿ ತನಿಖೆಗೆ ನಾವು ಸಿದ್ಧ: ಬಸವರಾಜ ಬೊಮ್ಮಾಯಿ‌

ಯಾವುದೇ ರೀತಿ ತನಿಖೆಗೆ ನಾವು ಸಿದ್ಧ: ಬಸವರಾಜ ಬೊಮ್ಮಾಯಿ‌
bangalore , ಮಂಗಳವಾರ, 30 ಮೇ 2023 (19:40 IST)
ಬಿಜೆಪಿ ಅವಧಿಯಲ್ಲಿ ನಡೆದ ಭ್ರಷ್ಟಾಚಾರ, ಅಕ್ರಮಗಳ ತನಿಖೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾಗೆ ಪತ್ರ ಬರೆದು 15 ದಿನಗಳಲ್ಲಿ ವರದಿ ನೀಡುವಂತೆ ಆದೇಶಿಸಿದ್ದಾರೆ. ಯಾವುದೇ ರೀತಿ ತನಿಖೆ ನಡೆಸಲಿ, ಅದನ್ನು ಎದುರಿಸಲು ನಾವು ಸಿದ್ಧರಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಿರುಗೇಟು ನೀಡಿದ್ದಾರೆ.ರೇಸ್ ಕೋರ್ಸ್ ರಸ್ತೆಯಲ್ಲಿರುವ ಅಧಿಕೃತ ನಿವಾಸದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಅವಧಿಯಲ್ಲಿ ಆದ ಹಗರಣ ತನಿಖೆ ವಿಚಾರಕ್ಕೆ ಹೆದರಲ್ಲ ಎಂದ್ರು....ನಮ್ಮ ಭಾರತದ ಸಂಸ್ಕೃತಿ, ಸಾಹಿತ್ಯ, ವಿಚಾರಗಳ ಆಧಾರ ಮೇಲೆ ಕೆಲವು ಹೊಸದಾಗಿ ಪಠ್ಯ ಪುಸ್ತಕದಲ್ಲಿ ಅಳವಡಿಕೆ ಮಾಡಿದ್ದೆವು. ಅವರು ಅದೇ ಜಾಡನ್ನು ಹಿಡಿದು ಹೊಸ ಕಮಿಟಿ ಮಾಡಲು ಹೊರಟಿದ್ದಾರೆ. ಇದಕ್ಕೆ ಸಮಾಜವೇ ಪ್ರತಿಕ್ರಿಯೆ ನೀಡಲಿದೆ. ಮಕ್ಕಳಿಗೆ ಶಿಕ್ಷಣ ನೀಡುವ ಬಗ್ಗೆ ಪೋಷಕರು ಗಮನಿಸುತ್ತಿದ್ದಾರೆ. ಪಠ್ಯ ಪದೇ ಪದೇ ಬದಲಾವಣೆಯಿಂದ ಮಕ್ಕಳಿಗೆ ಸಮಸ್ಯೆ ಆಗಬಾರದು ಜವಾಬ್ದಾರಿ ಸರ್ಕಾರದ ಮೇಲಿದೆ, ಸರ್ಕಾರ ಏನು ಮಾಡಲಿದೆ ನೋಡೋಣ ಎಂದು ಮಾಜಿ ಸಿಎಂ ಹೇಳಿಕೆ ನೀಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಅಧಿಕಾರಿಗಳಿಗೆ ಡಿಸಿಎಂ ಆವಾಜ್..ವಿಡಿಯೋ ಮಾಡದಂತೆ ವಾರ್ನಿಂಗ್