Webdunia - Bharat's app for daily news and videos

Install App

ಉತ್ತಮ ಸ್ಕೋರ್​​​ ಮಾಡಲು ರೆಡಿಯಾಗಿದ್ದೇವೆ- ಮಾಜಿ ಸಚಿವ H.D. ರೇವಣ್ಣ

Webdunia
ಗುರುವಾರ, 23 ಮಾರ್ಚ್ 2023 (17:01 IST)
ಯಾವುದೇ ಬೌಲಿಂಗ್ ಬಂದರೂ ಉತ್ತಮ ಸ್ಕೋರ್ ಕೊಡುವ ಪ್ರಯತ್ನ ಮಾಡುತ್ತೇನೆ. ರಾಜ್ಯದ ಜನ ತಿರುಗಿ ನೋಡುವಂತೆ ಫಲಿತಾಂಶ ಕೊಡಲು ಜನ ತಯಾರಾಗಿದ್ದಾರೆ. ಹಾಸನ ಜಿಲ್ಲೆಯಲ್ಲಿ ಏಳಕ್ಕೆ ಏಳು ಕ್ಷೇತ್ರ JDS ಗೆಲ್ಲುತ್ತದೆ ಎಂಬ ಮಾಜಿ ಸಚಿವ H.D. ರೇವಣ್ಣ ಹೇಳಿಕೆಗೆ ಶಾಸಕ ಪ್ರೀತಂ ಗೌಡ ಟಾಂಗ್ ನೀಡಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರಾದರೂ ಏಳಕ್ಕೆ ಏಳು ಕ್ಷೇತ್ರ ಗೆಲ್ಲಲೇಬೇಕು. ಆದರೆ JDS ಎಷ್ಟು? BJP ಎಷ್ಟು? ಕಾಂಗ್ರೆಸ್ ಎಷ್ಟು ಎಂದು ಫಲಿತಾಂಶದ ದಿನ ಗೊತ್ತಾಗುತ್ತದೆ. ವಿಪಕ್ಷಗಳು ಹಾಸನ ಕ್ಷೇತ್ರದ ಟಿಕೆಟ್ ಇನ್ನೂ ಅಂತಿಮಗೊಳಿಸಲಿಲ್ಲ. ನಮ್ಮ ಟಿಕೆಟ್ ಕೂಡ ರಾಷ್ಟ್ರೀಯ ನಾಯಕರು ಇನ್ನೂ ಘೋಷಣೆ ಮಾಡಿಲ್ಲ. ಎಲ್ಲದಕ್ಕೂ ಕಾಯುತ್ತಿದ್ದೇವೆ ಎಂದರು. ಅಖಾಡದಲ್ಲಿ ಯಾರು ಅಭ್ಯರ್ಥಿಯಾಗುತ್ತಾರೆ ಎಂದು ನಿರ್ಧಾರವಾದ ಮೇಲೆ ಕಾವೇರುತ್ತದೆ. ನಂತರ ಸ್ಪೀಡ್ ಬೌಲರ್‌ಗೆ ಯಾವರೀತಿಯಾಗಿ ಫುಟ್ ಹಾಕಬೇಕು. ಸ್ಪಿನ್, ಮೀಡಿಯಂ ಪೇಸರ್ ಆದರೆ ಹೇಗೆ ಆಡಬೇಕು ಎಂದು ವರ್ಕೌಟ್ ಮಾಡಿದ್ದೇನೆ. ಯಾವ ಬೌಲರ್ ಬರುತ್ತಾರೆ ಎಂದು ನೋಡಿ, ಪವರ್ ಪ್ಲೇ ಹೇಗೆ ಆಡಬೇಕು, ಸ್ಲ್ಯಾಗ್ ಓವರ್ ಹೇಗೆ ಆಡಬೇಕು, ಮಧ್ಯದಲ್ಲಿ ಹೇಗೆ ಆಡಬೇಕು ಎಂದು ನೋಡುತ್ತೇನೆ ಎಂದು ವ್ಯಂಗ್ಯವಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments