Publish Date: Sat, 07 Jan 2023 (08:17 IST)
Updated Date: Sat, 07 Jan 2023 (09:12 IST)
ಚಿಕ್ಕಬಳ್ಳಾಪುರ : ದೇಶ ಕಾಯುವಾಗ ನಾವು ನಿಯತ್ತಿನ ನಾಯಿಗಳು, ದೇಶ – ರಾಜ್ಯದ ಹಿತಾಸಕ್ತಿ ಪ್ರಶ್ನೆ ಬಂದಾಗ ನಾವೆಲ್ಲರೂ ರಾಜಾಹುಲಿಗಳು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಗುಡುಗಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸಿಎಂ ಬೊಮ್ಮಾಯಿ ಅವರನ್ನ ನಾಯಿಮರಿಗೆ ಹೋಲಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಅವರು, ನಾಯಿ ನಿಯತ್ತಿನ ಪ್ರಾಣಿ.
ತುತ್ತು ಅನ್ನ ಹಾಕಿದ್ರೆ ಜೀವನಪರ್ಯಂತ ನಿಯತ್ತಾಗಿರುತ್ತೆ. ನಿಯತ್ತು ಇಲ್ಲದೇ ಇರೋರು ಕಾಂಗ್ರೆಸ್ನವರು. ಉಂಡ ಮನೆಗೆ ದ್ರೋಹ ಬಗೆಯುವವರು ಯಾರು ಅಂತಾ ಸಿದ್ದರಾಮಯ್ಯಗೆ ಗೊತ್ತು ಎಂದು ವಾಗ್ದಾಳಿ ನಡೆಸಿದ್ದಾರೆ.