Publish Date: Thu, 09 Feb 2023 (16:14 IST)
Updated Date: Thu, 09 Feb 2023 (16:18 IST)
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜಾಧ್ವನಿ ಯಾತ್ರೆ ವೇಳೆ ಶಿವಮೊಗ್ಗದ ಭದ್ರಾವತಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಫೆಬ್ರವರಿ 22ಕ್ಕೆ ನನಗೆ ಇಡಿಯವರು ವಿಚಾರಣೆಗೆ ಕರೆದಿದ್ದಾರೆ. ನಾನು ಪ್ರಜಾಧ್ವನಿ ಯಾತ್ರೆ ಮಾಡಲೋ ಅಥವಾ ಇಡಿಯವರ ಬಳಿ ಹೋಗಲೋ. ಕೇವಲ ನಮಗೆ ಮಾತ್ರ ಇಡಿಯವರು ಇರೋದು. ಆಡಳಿತ ಪಕ್ಷದವರಿಗೆ ಇಡಿ, ಸಿಬಿಐನವರು ಯಾರೂ ಇಲ್ಲ. ಇರಲಿ ನೋಡೋಣ ಏನಾಗುತ್ತೋ ಅಂತಾ ಪ್ರಜಾಧ್ವನಿ ಯಾತ್ರೆ ವೇಳೆ ಬೇಸರದಿಂದಲೇ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ.