Webdunia - Bharat's app for daily news and videos

Install App

ಸಮವಸ್ತ್ರಗಳ ಖರೀದಿಯಾಗಿರುವುದು ಹೊರ ರಾಜ್ಯಗಳಲ್ಲೇ: ಚಿಂಚನಸೂರ

Webdunia
ಗುರುವಾರ, 9 ಏಪ್ರಿಲ್ 2015 (17:03 IST)
ಶಾಲಾ ಮಕ್ಕಳ ಸಮವಸ್ತ್ರಗಳನ್ನು ಹೊರ ರಾಜ್ಯಗಳಿಂದ ಖರೀದಿ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಜವಳಿ ಸಚಿವ ಬಾಬುರಾವ್ ಚಿಂಚನಸೂರ ಅವರು ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿರುವ ವಿದ್ಯುತ್ ಮಗ್ಗಗಳಲ್ಲಿ ಕೇವಲ ಸೀರೆಗಳ ಉತ್ಪಾದನೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶಾಲಾ ಮಕ್ಕಳ ಉಡುಪುಗಳನ್ನು ಹೊರ ರಾಜ್ಯಗಳಿಂದ ಆಮದು ಮಾಡಿಕೊಳ್ಳಲಾಗಿದೆ ಎಂದಿದ್ದಾರೆ. 
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿರುವ ವಿದ್ಯುತ್ ಮಗ್ಗಗಳಲ್ಲಿ ಕೇವಲ ಸೀರೆಗಳ ಉತ್ಪಾದನೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಉಡುಪುಗಳಿಗೆ ಕೊರತೆ ಎದುರಾಗಿತ್ತು. ಆದ್ದರಿಂದ ಮಕ್ಕಳಿಗೆ ವಿತರಿಸಬೇಕಿದ್ದ ಸಮವಸ್ತ್ರಗಳನ್ನು ಹೊರ ರಾಜ್ಯಗಳಿಂದ ಆಮದು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. 
 
ಬಳಿಕ, ಹೊರ ರಾಜ್ಯಗಳಿಂದ ತರಿಸಿಕೊಳ್ಳಲಾಗಿದ್ದರೂ ಕೂಡ ಕಾನೂನು ಬಾಹಿರವಾಗಿ ತರಿಸಿಕೊಂಡಿಲ್ಲ. ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಮುಖ್ಯ ಕಾರ್ಯದರ್ಶಿಯವರ ನೇತೃತ್ವದಲ್ಲಿ ಟೆಂಡರ್ ಮೂಲಕ ಖರೀದಿಸಲಾಗಿದೆ ಎಂದು ಸ್ಪಷ್ಟಪಡಿಸಿದರು. 
 
ರಾಜ್ಯದಲ್ಲಿ ಅಗತ್ಯವಾದಷ್ಟು ಬಟ್ಟೆಗಳು ಉತ್ಪಾದನೆಯಾಗುತ್ತಿದ್ದರೂ ಕೂಡ ಶಾಲಾ ಮಕ್ಕಳ ಸಮವಸ್ತ್ರಗಳನ್ನು ಹೊರ ರಾಜ್ಯಗಳಿಂದ ಖರೀದಿ ಮಾಡಲಾಗಿದೆ ಎಂಬ ಆರೋಪ ಅವರ ವಿರುದ್ಧ ಕೇಳಿ ಬಂದಿತ್ತು. ಅಲ್ಲದೆ ರಾಜ್ಯದಲ್ಲಿ ಬಟ್ಟೆ ನೇಯ್ಗೆಗಾಗಿ ಸಾಕಷ್ಟು ಕಾರ್ಖಾನೆಗಳು, ವಿದ್ಯುತ್ ಹಾಗೂ ಕೈ ಮಗ್ಗಗಳಿರುವಾಗ ಸರ್ಕಾರವು ಹೊರ ರಾಜ್ಯಗಳಿಂದ ಬಟ್ಟೆಗಳನ್ನು ಖರೀದಿಸಿದೆ. ಈ ಮೂಲಕ ಇಲ್ಲಿನ ಜವಳಿ ಉದ್ಯಮವನ್ನು ಕುಂಠಿತಗೊಳಿಸಲಾಗುತ್ತಿದೆ ಎಂಬ ಆರೋಪವಿತ್ತು. ಈ ಹಿನ್ನೆಲೆಯಲ್ಲಿ ಸಚಿವರು ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments