Webdunia - Bharat's app for daily news and videos

Install App

ನಾವೇನು ಪುಕ್ಕಟ್ಟೆ ಅಕ್ಕಿ ಕೊಡಿ ಅಂತ ಕೇಳಲ್ಲ

Webdunia
ಗುರುವಾರ, 15 ಜೂನ್ 2023 (20:40 IST)
ಅನ್ನಭಾಗ್ಯಕ್ಕೆ ಅಕ್ಕಿ ನೀಡಲು ಕೇಂದ್ರ ಸರ್ಕಾರ ನಿರಾಕರಿಸಿರುವುದನ್ನು ಸಚಿವ ಪ್ರಿಯಾಂಕ್​ ಖರ್ಗೆ ಖಂಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ದುರುದ್ದೇಶದಿಂದ ಕೇಂದ್ರ ಸರ್ಕಾರ ಈ ರೀತಿ ಮಾಡಿದೆ. ಮೊದಲು ಆಹಾರ ಧಾನ್ಯ ಖರೀದಿ ಮಾಡಲು FCIಗೆ ಹೋಗಬೇಕು. ನಾವೇನು ಪುಕ್ಕಟ್ಟೆ ಅಕ್ಕಿ ಕೊಡಿ ಅಂತ ಕೇಳಲ್ಲ. ನಾವೇ ದುಡ್ಡು ಕೊಡುತ್ತೀವಿ ಅಕ್ಕಿ ಕೊಡಿ ಎಂದ್ರು ಕೊಡಲ್ಲ ಅಂತ ಹೇಳ್ತಿದ್ದಾರೆ. ಯಾಕೆ ಕೊಡಲ್ಲ ಅಂತ ಕೇಂದ್ರ ಸರ್ಕಾರ ಹೇಳಬೇಕು ಎಂದು ಕಿಡಿಕಾರಿದ್ರು. ದುಡಿಯುವ ಕೈಯನ್ನು ಚೆನ್ನಾಗಿ ನೋಡ್ಕೋತ್ತೀವಿ ಅಂದ್ರೆ ಯಾಕೆ ಅಡ್ಡಗಾಲು ಹಾಕ್ತಿದ್ದಾರೆ. ಇದನ್ನು ನೋಡಿಕೊಂಡು ನಾವು ಸುಮ್ಮನೆ ಕುಳಿತಿಕೊಳ್ಳಲ್ಲ. ಬೇರೆ ರಾಜ್ಯದಿಂದ ಖಾಸಗಿ ಆಗಿ ಆಹಾರ ಧಾನ್ಯಗಳನ್ನು ತೆಗೆದುಕೊಂಡು ಬರ್ತಿವಿ. ನಮಗೆ ಯಾಕೆ ಕೇಂದ್ರ ಸರ್ಕಾರ ಅಕ್ಕಿ ಕೊಡಲು ತಯಾರಿಲ್ಲ ಎಂದು ರಾಜ್ಯ ಬಿಜೆಪಿ ನಾಯಕರು ಉತ್ತರ ಕೊಡಲಿ ಎಂದು ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments