Select Your Language

Notifications

webdunia
webdunia
webdunia
webdunia

ವಿದ್ಯುತ್ ದರ ಏರಿಕೆ ನಾವು ಮಾಡಿಲ್ಲ : ಬಸವರಾಜ ಬೊಮ್ಮಾಯಿ

ವಿದ್ಯುತ್ ದರ ಏರಿಕೆ ನಾವು ಮಾಡಿಲ್ಲ : ಬಸವರಾಜ ಬೊಮ್ಮಾಯಿ
ಬೆಂಗಳೂರು , ಬುಧವಾರ, 14 ಜೂನ್ 2023 (10:06 IST)
ರಾಜ್ಯದಲ್ಲಿ ಏಕಾಏಕಿ ವಿದ್ಯುತ್ ದರ ಏರಿಕೆ ಬಗ್ಗೆ ಸ್ಪಷ್ಟನೆ ನೀಡಿದ ಮಾಜಿ ಸಿಎಂ ಬೊಮ್ಮಾಯಿ, ನಾವು ವಿದ್ಯುತ್ ದರ ಏರಿಕೆ ಅನುಷ್ಠಾನ ತಂದಿಲ್ಲ. ವಿದ್ಯುತ್ ದರ ಏರಿಕೆ ನಮ್ಮ ಸರ್ಕಾರ ಮಾಡಿಲ್ಲ.

ದರ ಏರಿಕೆ ವರದಿಯನ್ನು ನಾವು ಒಪ್ಪಿರಲಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ವಿದ್ಯುತ್ ದರ ಏರಿಕೆಯ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ. ಇದರಿಂದಾಗಿ ದರ ಜಾಸ್ತಿ ಆಗಿದೆ ಎಂದು ರಾಜ್ಯ ಸರ್ಕಾರದ ನಡೆಯ ವಿರುದ್ಧ ಅಸಮಾಧಾನ ಹೊರಹಾಕಿದರು.

ನಾನು ವಿಪಕ್ಷ ಸ್ಥಾನದ ಆಕಾಂಕ್ಷಿಯ ಪ್ರಶ್ನೆಯೇ ಇಲ್ಲ. ಈ ಸ್ಥಿತಿಯಲ್ಲಿ ವಿಳಂಬವಾಗ್ತಿಲ್ಲ. ಅಧಿವೇಷನ ಕರೆದ ಕೂಡಲೇ ವಿರೋಧ ಪಕ್ಷದ ನಾಯಕರ ಆಯ್ಕೆ ನಡೆಯುತ್ತೆ. ಪ್ರತಿ ಬಾರಿ ನಡೆಯುವ ಸಂಪ್ರದಾಯ ಇದಾಗಿದೆ ಎಂದರು. 

ವಿಧಾನ ಪರಿಷತ್ ಚುನಾವಣೆಯ ಮೂರೂ ಸ್ಥಾನಕ್ಕೆ ನಾವು ಸ್ಪರ್ಧಿಸುತ್ತೇವೆ. ಮೂರು ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲ್ಲೋದು ಖಚಿತ. ಆದರೂ ಪ್ರತಿಪಕ್ಷವಾಗಿ ಸ್ಪರ್ಧಿಸುತ್ತೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಕೃತಿ ವಿಕೋಪಗಳಿಗೆ ನೀಡುವ ಪರಿಹಾರ ಹೆಚ್ಚಿಸಿ : ಕೃಷ್ಣ ಬೈರೇಗೌಡ