Webdunia - Bharat's app for daily news and videos

Install App

ನಾವು ಅವರ ತರಹ ಅಧಿಕಾರ ದುರುಪಯೋಗ ಮಾಡಿಕೊಳ್ಳಲ್ಲ- ಡಿಕೆಶಿ

Webdunia
ಬುಧವಾರ, 3 ಜನವರಿ 2024 (14:21 IST)
ಕರಸೇವಕ ಬಂಧನ ವಿರೋಧಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ಹಿನ್ನೆಲೆ ‌ನಗರದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಗೃಹ ಸಚಿವರು ಈಗಾಗಲೇ ಸ್ಪಷ್ಟನೆ ಕೊಟ್ಟಿದ್ದಾರೆ.ನಾವು ಯಾರಿಗೂ ತೊಂದರೆ ಕೊಡುವ ಸಂಧರ್ಭ ಇಲ್ಲ.ಪೆಡಿಂಗ್ ಇದ್ದ ಕೇಸ್ ಗಳನ್ನ,ಯಾರು ದೇಶಕ್ಕೆ ರಾಜ್ಯಕ್ಕೆ ಅಗೌರವ, ಅಶಾಂತಿ ಮೂಡಿಸುತ್ತಾರೋ ಕಾನೂನು ರೀತಿಯಲ್ಲಿ ಮೊದಲಿಂದಲೂ ಕ್ರಮ ತೆಗೆದುಕೊಳ್ಳುತ್ತಿದ್ದಾರೆ.

ಪಾಪ ಎಲೆಕ್ಷನ್  ಹತ್ರ ಬಂತು ಈಗ, ಏಳು ತಿಂಗಳು ಆಯಿತು ವಿಪಕ್ಷ ನಾಯಕರನ್ನ ಮಾಡಲು ಆಗಿರಲಿಲ್ಲ.ಈಗ ಪಾಪ ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಮಾಡುತ್ತಿದ್ದಾರೆ.ಅವರು ಏನು ಬೇಕಾದರೂ ಮಾಡಿಕೊಳ್ಳಲಿ.ಪ್ರಜಾಪ್ರಭುತ್ವದಲ್ಲಿ ಜನ ಉತ್ತರ ಕೊಡ್ತಾರೆ.ನಾವು ಸಹ ಉತ್ತರ ಕೊಡುತ್ತೇವೆ.

ನಾವು ಅವರ  ತರಹ ಅಧಿಕಾರ ದುರುಪಯೋಗ ಮಾಡಿಕೊಳ್ಳಲ್ಲ.ಕಾಂಗ್ರೆಸ್ ಕಾರ್ಯಕರ್ತರ ಮೇಲೆ  ಕೇಸ್ ಹಾಕಿದ್ದರು.ಬೆಂಗಳೂರು, ಹುಬ್ಬಳ್ಳಿಯಲ್ಲಿ ಕೇಸ್ ಹಾಕಿದ್ದಾರೆ‌.ಅಮಾಯಕರ ಮೇಲೆ ಕೇಸ್ ಹಾಕಿದ್ದಾರೆ.ನಾವು ಅವರ ರೀತಿಯಲ್ಲಿ ಮಾಡುವುದಿಲ್ಲ ಹಿಂದೆ ಮಾಡಿಲ್ಲ, ಮುಂದೆಯೂ ಮಾಡಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
 
ಇನ್ನೂ ವಿಪಕ್ಷ ನಾಯಕ ಪೊಲೀಸ್ ಠಾಣೆ ಮುತ್ತಿಗೆ ಹಾಕುವ ವಿಚಾರವಾಗಿ ಹೋಗಿ ಕಟ್ಟಿಹಾಕಿಕೊಂಡು ಬಿಡಲಿ.ಅವರು ಗೃಹ ಸಚಿವರಾದಗ ಪೊಲೀಸ್ ರಿಗೆ ಕೇಸರಿ ಬಟ್ಟೆ ಹಾಕಿ ಅಧಿಕಾರಿಗಳನ್ನ ನಿಲ್ಲಿಸಿದ್ದರು.ಆ ಕೆಲಸ ನಾವು ಮಾಡಲು ಹೋಗಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಕ್ಷಣೆ ನೀಡಬೇಕಿದ್ದ ಕೈಯಿಂದಲೇ 10ರ ಬಾಲಕಿ ಮೇಲೆ ರೇಪ್ ಆಂಡ್ ಮರ್ಡರ್‌, ಕಾನ್ಸ್‌ಟೇಬಲ್ ಅರೆಸ್ಟ್‌

ಬಟ್ಟೆ ನೆನೆಯಲು ಹಾಕಿದ್ದ ಬಕೆಟ್‌ಗೆ ಬಿದ್ದು 8 ತಿಂಗಳ ಕಂದಮ್ಮ ಸಾವು

ಪ್ರಧಾನಿ ಮೋದಿಗೆ ಬೈದಿದ್ದ ವೈರಲ್ ಹುಡುಗಿ ನಿಶೂ ಮನೆ ಖಾಲಿ ಮಾಡಿಸಿದ ಮಾಲಿಕ Video

ಜಂತರ್ ಮಂತರ್‌ನಲ್ಲಿ ಭಾಗಿಯಾದ ಪ್ರತಿಭಟನಕಾರರಿಗೆ ಬಿಗ್ ರಿಲೀಫ್

Karnataka Weather: ಭಾರೀ ಮಳೆ, ಇದೇ 31ರ ವರೆಗೆ ರಾಜ್ಯದ ಈ 15ಜಿಲ್ಲೆಗಳಲ್ಲಿ ಆರೆಂಜ್ ಆಲರ್ಟ್‌

ಮುಂದಿನ ಸುದ್ದಿ
Show comments