Select Your Language

Notifications

webdunia
webdunia
webdunia
webdunia

ಬಿಎಸ್‌ವೈ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು: ಗೋವಿಂದರಾಜು

ಬಿಎಸ್‌ವೈ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲು: ಗೋವಿಂದರಾಜು
ಬೆಂಗಳೂರು , ಸೋಮವಾರ, 13 ಫೆಬ್ರವರಿ 2017 (18:21 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಮ್ಮ ವಿರುದ್ಧ ಇಲ್ಲ ಸಲ್ಲದ ಆರೋಪಗಳನ್ನು ಮಾಡಿದ ಹಿನ್ನೆಲೆಯಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದೇನೆ ಎಂದು ವಿಧಾನಪರಿಷತ್ ಸದಸ್ಯ, ಹಿರಿಯ ಕಾಂಗ್ರೆಸ್ ಮುಖಂಡ ಗೋವಿಂದರಾಜು ಹೇಳಿದ್ದಾರೆ.
 
ಮನೆಯಲ್ಲಿ ದೊರೆತ ಡೈರಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ಗೆ ಒಂದು ಸಾವಿರ ಕೋಟಿ ಹಣ ಸಂದಾಯ ಮಾಡಲಾಗಿದೆ ಎನ್ನುವ ದಾಖಲೆಗಳು ದೊರೆತಿವೆ ಎನ್ನುವ ಯಡಿಯೂರಪ್ಪ ಆರೋಪದಲ್ಲಿ ಸತ್ಯಾಂಶವಿಲ್ಲ ಎಂದು ತಿರುಗೇಟು ನೀಡಿದ್ದಾರೆ.
 
ಯಡಿಯೂರಪ್ಪ ದೊಡ್ಡ ನಾಯಕರಾಗಿದ್ದರೂ ದಾಖಲೆಗಳಿಲ್ಲದೇ ಆರೋಪಗಳನ್ನು ಮಾಡುತ್ತಾರೆ. ಆದರೆ, ನಾನು ದಾಖಲೆಗಳಿಲ್ಲದೆ ಯಾವುದೇ ಆರೋಪ ಮಾಡುವುದಿಲ್ಲ ಎಂದರು.
 
ಈಗಾಗಲೇ ಯಡಿಯೂರಪ್ಪ ವಿರುದ್ಧ ಲೀಗಲ್ ನೋಟಿಸ್ ಜಾರಿಗೊಳಿಸಿದ್ದು, ನೋಟಿಸ್‌ಗೆ ಉತ್ತರಿಸಲಿ.ಆರೋಪಗಳನ್ನು ಮಾಡುವುದು ಸುಲಭ ಆದರೆ, ಆರೋಪಗಳಿಗೆ ಸೂಕ್ತ ದಾಖಲೆಗಳನ್ನು ಒದಗಿಸುವುದು ಕಷ್ಟ ಎಂದು ವಿಧಾನಪರಿಷತ್ ಸದಸ್ಯ ಗೋವಿಂದರಾಜು ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸಿಡಿ ಬಗ್ಗೆ ಯಡಿಯೂರಪ್ಪ-ಅನಂತ್ ಕುಮಾರ್ ಪ್ರತಿಕ್ರಿಯೆ ಏನು ಗೊತ್ತಾ..?