ನೀರಿಲ್ಲ ಅಂತಾ ನಿವೇದಿಸಿಕೊಂಡಿದ್ದೇವೆ-ಸಿಎಂ ಸಿದ್ದರಾಮಯ್ಯ

Webdunia
ಬುಧವಾರ, 20 ಸೆಪ್ಟಂಬರ್ 2023 (16:21 IST)
ನಾವು ನಿರೀಕ್ಷೆ ಮಾಡಿದಷ್ಟು ಮಳೆ ಬರುವುದಿಲ್ಲ.. ಈ ಹಿನ್ನೆಲೆ ನೀರಿನ ಕೊರತೆ ಎದುರಾಗಿದೆ. ನಮಗೆ 107 TMC ನೀರು ಅವಶ್ಯಕತೆಯಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ರು. ದೆಹಲಿಯಲ್ಲಿ ಕಾವೇರಿ ಸಭೆ ಬಳಿಕ ಪ್ರತಿಕ್ರಿಯಿಸಿದ್ರು. CWMA ಮತ್ತು CWRC ಸಮಿತಿ ಮುಂದೆ ನೀರಿಲ್ಲ ಅಂತಾ ನಿವೇದನೆ ಮಾಡಿದ್ದೇವೆ.. ತಮಿಳುನಾಡು 24 ಸಾವಿರ ಕ್ಯೂಸೆಕ್ ನೀರಿನ ಬೇಡಿಕೆ ಇಟ್ಟಿದೆ.. ಮೊದಲು 10 ಸಾವಿರ ಕ್ಯೂಸೆಕ್ ನೀರು ಹರಿಸಲು ಆದೇಶ ನೀಡಿತ್ತು.. ನಾವು ಇದ್ದ ನೀರಿನಲ್ಲಿ ಅಲ್ಪ ನೀರು ಕೊಟ್ಟಿದ್ದೇವೆ. ಹಾಗಾಗಿ ತಮಿಳುನಾಡು ಸುಪ್ರೀಂಕೋರ್ಟ್ ಮೇಟ್ಟಿಲೇರಿದೆ. ಸುಪ್ರೀಂಕೋರ್ಟ್​ನಲ್ಲಿ ನಾವು ಆಕ್ಷೇಪಣೆ ಸಲ್ಲಿಸಿದ್ದೇವೆ ಎಂದು ತಿಳಿಸಿದ್ರು. ತಮಿಳುನಾಡು ಅರ್ಜಿ ವಿಚಾರಣೆಗೆ ಯೋಗ್ಯವಲ್ಲ ಅಂತಾ ಮನವಿ ಮಾಡಲಾಗಿದೆ.. ಆದ್ರೂ CWMA ಮತ್ತೆ 5 ಸಾವಿರ ಕ್ಯೂಸೆಕ್ ನೀರು ಹರಿಸಲು ಆದೇಶಿಸಿದೆ.. ಈಗ ಮತ್ತೆ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸುತ್ತೇವೆ.. ಹಾಲಿ 5 ಸಾವಿರ ಕ್ಯೂಸೆಕ್ ನೀರು ಹರಿಸಲು ಸಾಧ್ಯವಿಲ್ಲ ಅಂತಾ ಅರ್ಜಿ ಹಾಕುತ್ತೇವೆ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವ ಮೊದಲು ಈ ಒಂದು ಕೆಲಸ ಮಾಡಲಿದ್ದಾರೆ ಸಿದ್ದರಾಮಯ್ಯ

ಸಿದ್ದರಾಮಯ್ಯ ಬಳಿ ರಾಜೀನಾಮೆ ಕೇಳಲು ರಾಹುಲ್ ಗಾಂಧಿ ಮನವೊಲಿಸಿದ ವ್ಯಕ್ತಿ ಯಾರೆಂದು ಬಯಲು

ಸಿಎಂ ಸ್ಥಾನಕ್ಕೆ ರಾಜೀನಾಮೆ ಸುದ್ದಿ ಬೆನ್ನಲ್ಲೇ ಇಂದು ಸಿದ್ದರಾಮಯ್ಯ, ಡಿಕೆಶಿ ಒಂದೇ ವೇದಿಕೆಯಲ್ಲಿ

Karnataka Weather: ಇಂದು ಯಾವ ಜಿಲ್ಲೆಗಳಲ್ಲಿ ಮಳೆ, ತಪ್ಪದೇ ಗಮನಿಸಿ

ಕರ್ನಾಟಕ ಸಿಎಂ ಬದಲಾವಣೆಗೆ ಬಿಗ್ ಟ್ವಿಸ್ಟ್: ರಾಜೀನಾಮೆಗೆ ಸಿದ್ದರಾಮಯ್ಯ ನಿರ್ಧಾರ?

ಮುಂದಿನ ಸುದ್ದಿ
Show comments