Select Your Language

Notifications

webdunia
webdunia
webdunia
webdunia

ಬೆಂಗಳೂರನ್ನು ನಾವೇ ಅಭಿವೃದ್ಧಿ ಮಾಡಿದ್ದೇವೆಯೇ ಹೊರತು ಕಾಂಗ್ರೆಸ್, ಬಿಜೆಪಿಯಲ್ಲ: ಡಿಕೆಶಿ

ಬೆಂಗಳೂರನ್ನು ನಾವೇ ಅಭಿವೃದ್ಧಿ ಮಾಡಿದ್ದೇವೆಯೇ ಹೊರತು ಕಾಂಗ್ರೆಸ್, ಬಿಜೆಪಿಯಲ್ಲ: ಡಿಕೆಶಿ
ಬೆಂಗಳೂರು , ಸೋಮವಾರ, 20 ಏಪ್ರಿಲ್ 2015 (15:19 IST)
ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಕೇವಲ ವಾದ ವಿವಾದಗಳಲ್ಲಿಯೇ ಕಾಲ ಕಳೆಯುತ್ತಿವೆ. ಬೆಂಗಳೂರನ್ನು ನಾವೇ ಅಭಿವೃದ್ಧಿ ಮಾಡಿದ್ದೇವೆ ಹೊರತು ವಿಪಕ್ಷಗಳ ಸರಕಾರಗಳಲ್ಲ ಎಂದು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಬಿಬಿಎಂಪಿಯನ್ನು ವಿಭಜಿಸಿ ಬೆಂಗಳೂರು ನಗರವನ್ನು ಒಡೆಯಲು ಕಾಂಗ್ರೆಸ್ ಸರಕಾರ ಪ್ರಯತ್ನಿಸುತ್ತಿದೆ ಎಂದು ಜೆಡಿಎಸ್ ಮುಖಂಡ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಿಸಿದಾಗ ಕೆಂಡಾಮಂಡಲವಾದ ಸಚಿವ ಶಿವಕುಮಾರ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಸರಕಾರಗಳು ಅಧಿಕಾರದಲ್ಲಿದ್ದಾಗ ರಾಜ್ಯ ಅಭಿವೃದ್ಧಿಯಾಗಲಿಲ್ಲ. ಕಾಂಗ್ರೆಸ್ ಸರಕಾರವಿದ್ದಾಗ ಮಾತ್ರ ರಾಜ್ಯ ಅಭಿವೃದ್ಧಿಯಾಗಿದೆ ಎಂದು ತಿರುಗೇಟು ನೀಡಿದರು.

ಜೆಡಿಎಸ್ ಸರಕಾರ ಅಧಿಕಾರದಲ್ಲಿದ್ದಾಗ ಮೆಟ್ರೋ ನಿಲ್ದಾಣ, ರಸ್ತೆಗಳ ಅಗಲಿಕರಣ ಸೇರಿದಂತೆ ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಕುಮಾರಸ್ವಾಮಿ ಪ್ರತ್ಯುತ್ತರ ನೀಡಿದರು.

ಡಿಕೆಶಿ ಆರೋಪಕ್ಕೆ ಮಾರುತ್ತರ ನೀಡಿದ ಬಿಜೆಪಿ ಮುಖಂಡ ಆರ್.ಅಶೋಕ್, ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ರಾಜ್ಯದಲ್ಲಿ ಅನೇಕ ಅಭಿವೃದ್ಧಿ ಪರ ಯೋಜನೆಗಳಿಗೆ ಚಾಲನೆ ನೀಡಿದೆ. ಕಾಂಗ್ರೆಸ್ ಸರಕಾರ ಅಭಿವೃದ್ಧಿಗೆ ಮಾರಕವಾಗಿದೆ ಎಂದು ಲೇವಡಿ ಮಾಡಿದರು.  




Share this Story:

Follow Webdunia kannada