Select Your Language

Notifications

webdunia
webdunia
webdunia
webdunia

ಮಹದಾಯಿ ವಿವಾದ ಪ್ರಕರಣದಲ್ಲಿ ಸಮರ್ಪಕ ವಾದ ಮಂಡನೆ: ಕಾತರಕಿ

ಮಹದಾಯಿ ವಿವಾದ
ನವದೆಹಲಿ , ಶನಿವಾರ, 6 ಆಗಸ್ಟ್ 2016 (16:03 IST)
ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ನಮ್ಮ ವಾದ ಸಮರ್ಥನೀಯವಾಗಿದೆ ಎಂದು ರಾಜ್ಯ ಜಲವಿವಾದಗಳ ಪರ ವಕೀಲ ಮೋಹನ್ ಕಾತರಕಿ ಸ್ಪಷ್ಟಪಡಿಸಿದ್ದಾರೆ.
 
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಸಮರ್ಪಕವಾಗಿ ವಾದ ಮಾಡಿದ್ದೇನೆ. ಕೆಲವರು ವೈಯಕ್ತಿಕ ಕಾರಣಗಳಿಂದ ಆರೋಪ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ವಿವಾದಕ್ಕೆ ಸಂಬಂಧಿಸಿದಂತೆ ನಮ್ಮ ವಾದದ ಬಗ್ಗೆ ತೃಪ್ತಿ ಇಲ್ಲದಿದ್ದರೆ ಸರಕಾರ ಕ್ರಮ ಕೈಗೊಳ್ಳಲಿ. ಸರಕಾರ ಕೇಳಿದರೆ 24 ಗಂಟೆಗಳಲ್ಲಿ ರಾಜೀನಾಮೆ ನೀಡಲು ಸಿದ್ದವಾಗಿದ್ದೇನೆ ಎಂದು ರಾಜ್ಯ ಜಲವಿವಾದಗಳ ವಕೀಲ ಮೋಹನ್ ಕಾತರಕಿ ತಿಳಿಸಿದ್ದಾರೆ.


ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಅಲ್ಲಾಹ ಎಂದು ಉದ್ಗರಿಸಿದ್ದಕ್ಕೆ ವಿಮಾನದಿಂದ ಕೆಳಗಿಳಿಸಿದರು