Select Your Language

Notifications

webdunia
webdunia
webdunia
webdunia

ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಮೈತ್ರಿ ಮಾಡಿಕೊಂಡಿದ್ದೇವೆ- ಶಾಸಕ ತನ್ವೀರ್ ಸೇಠ್

ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಮೈತ್ರಿ ಮಾಡಿಕೊಂಡಿದ್ದೇವೆ- ಶಾಸಕ ತನ್ವೀರ್ ಸೇಠ್
ಬೆಂಗಳೂರು , ಶುಕ್ರವಾರ, 26 ಫೆಬ್ರವರಿ 2021 (12:35 IST)
ಬೆಂಗಳೂರು : ಮೈಸೂರು ಪಾಲಿಕೆಯಲ್ಲಿ ಜೆಡಿಎಸ್, ಕಾಂಗ್ರೆಸ್ ಮೈತ್ರಿ ಹಿನ್ನಲೆ ತನ್ವೀರ್ ಸೇಠ್ ಗೆ ನೋಟಿಸ್ ನೀಡುತ್ತಾರೆಂಬ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಮೈಸೂರಿನ ಎನ್.ಆರ್.ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕಾಗಿ ನಾನು ನಿರ್ಧಾರ ಕೈಗೊಂಡಿದ್ದೇನೆ. ನಾನು ಯಾವುದೇ ತಪ್ಪು ಮಾಡಿಲ್ಲ. ನನಗೆ ನೋಟಿಸ್ ನೀಡುವ ಬಗ್ಗೆ ಯಾರೂ ಹೇಳಿಲ್ಲ. ನೋಟಿಸ್ ನೀಡಿದರೆ ಅದಕ್ಕೆ ತಕ್ಕ ಉತ್ತರ ನೀಡುತ್ತೇನೆ. ಯುದ್ಧಕಾಲದಲ್ಲಿ ಶಸ್ತ್ರಾಭ್ಯಾಸ ಯಾರು ಮಾಡುತ್ತಾರೆ? ಎಲ್ಲವನ್ನೂ ಕೆಪಿಸಿಸಿ ಅಧ್ಯಕ್ಷರ ಗಮನಕ್ಕೆ ತಂದಿದ್ದೇನೆ. ಅಧ್ಯಕ್ಷರ ಸೂಚನೆಯಂತೆ ಕೆಲಸ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವುದು, ಪ್ರಜಾಪ್ರಭುತ್ವ ಉಳಿಸುವುದಕ್ಕೆ ಮೈತ್ರಿ ಮಾಡಿಕೊಂಡಿದ್ದೇವೆ. ಇದರಲ್ಲಿ ನನ್ನದು ಯಾವುದೇ ವೈಯಕ್ತಿಕ ವಿಚಾರ ಎಂದು ಅವರು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಪ್ರಕರಣ; ಡಿಕೆಶಿ ಮೇಲೆ ಅಸಮಾಧಾನಗೊಂಡ ಶಾಸಕ ಅಖಂಡ ಶ್ರೀನಿವಾಸ್