Webdunia - Bharat's app for daily news and videos

Install App

ಯಾವುದೇ ಸಮಸ್ಯೆ ಕಂಡು ಬಂದಿಲ್ಲ, ಶಿವಣ್ಣ ಆರೋಗ್ಯವಾಗಿದ್ದಾರೆ: ಡಾ.ಶ್ರೀನಿವಾಸ್

Webdunia
ಬುಧವಾರ, 7 ಅಕ್ಟೋಬರ್ 2015 (12:33 IST)
ವರ್ಕ್ ಔಟ್ ಮಾಡುವ ವೇಳೆ ತಮ್ಮ ಬಲ ಭುಜ ಹಾಗೂ ಎದೆಯಲ್ಲಿ ಸ್ವಲ್ಪ ಮಟ್ಟಿನ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಡಾ.ಶಿವರಾಜ್ ಕುಮಾರ್ ಅವರನ್ನು ಪರೀಕ್ಷಿಸಿರುವ ಮಲ್ಯಾ ಆಸ್ಪತ್ರೆಯ ವೈದ್ಯ ಡಾ.ವಿ.ಕೆ.ಶ್ರೀನಿವಾಸ್ ಅವರು ಪ್ರತಿಕ್ರಿಯಿಸಿದ್ದು, ಶಿವಣ್ಣ ಅವರಿಗೆ ಹಲವು ಪರೀಕ್ಷೆಗಳನ್ನು ಮಾಡಲಾಗಿದ್ದು, ಯಾವುದೇ ಆರೋಗ್ಯ ಸಮಸ್ಯೆ ಇಲ್ಲ ಚೆನ್ನಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. 
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಣ್ಣ ಅವರು ಎದೆ ಹಾಗೂ ಭುಜ ನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಈ ಹಿನ್ನೆಲೆಯಲ್ಲಿ ಬಿಪಿ, ಇಸಿಜಿ, ರಕ್ತ ಹಾಗೂ ಆಂಜೋಗ್ರಾಂ ಪರೀಕ್ಷೆ ಸೇರಿದಂತೆ ಇನ್ನಿತರೆ ಪರೀಕ್ಷೆಗಳನ್ನು ಮಾಡಿದ್ದೇವೆ. ಆದರೆ ಅರಲ್ಲಿ ಯಾವುದೇ ರೀತಿಯ ಸಮಸ್ಯೆ ಕಂಡು ಬಂದಿಲ್ಲ. ಈ ಹಿನ್ನೆಲೆಯಲ್ಲಿ ಈಗಾಗಲೇ ಅವರನ್ನು ಸ್ಪೆಶಲ್ ವಾರ್ಡ್‌ಗೆ ಶಿಫ್ಟ್ ಮಾಡಲಾಗಿದ್ದು, ನಾಳೆ ಡಿಸ್ ಚಾರ್ಜ್ ಮಾಡಲಿದ್ದೇವೆ ಎಂದ ಅವರು, ಅವರಿಗೆ ವಿಶ್ರಾಂತಿ ಅಗತ್ಯವಿದೆ ಎಂದರು. 
 
ಇನ್ನು ಎಂದಿನಂತೆ ಇಂದು 5.30ರ ವೇಳೆಗೆ ಎದ್ದಿದ್ದ ಶಿವಣ್ಣ ವಾಕ್ ಮಾಡಿ ಮತ್ತೆ ತಿಂಡಿ ಸೇವಿಸಿದ್ದಾರೆ. ಅಲ್ಲದೆ ಆರೋಗ್ಯವಾಗಿದ್ದಾರೆ. ಯಾವುದೇ ಸಮಸ್ಯೆ ಇಲ್ಲ ಎಂದು ಸ್ಪಷ್ಟತೆ ನೀಡಿದರು.  

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments