Webdunia - Bharat's app for daily news and videos

Install App

ನ್ಯಾಯಾಂಗದ ಆದೇಶ ಧಿಕ್ಕರಿಸುವ ಉದ್ದೇಶ ನಮಗಿಲ್ಲ: ಸಿಎಂ ಸಿದ್ದರಾಮಯ್ಯ

Webdunia
ಶುಕ್ರವಾರ, 23 ಸೆಪ್ಟಂಬರ್ 2016 (18:53 IST)
ನ್ಯಾಯಾಂಗದ ಆದೇಶ ಧಿಕ್ಕರಿಸುವ ಉದ್ದೇಶ ನಮಗಿಲ್ಲ. ಆದರೆ, ರಾಜ್ಯದ ಪರಿಸ್ಥಿತಿಯನ್ನು ಸುಪ್ರೀಂಕೋರ್ಟ್ ಸಹ ಅರ್ಥ ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 
 
ಕಾವೇರಿಗಾಗಿ ನಡೆದ ವಿಶೇಷ ವಿಧಾನ ಮಂಡಲ ಅಧಿವೇಶದಲ್ಲಿ ಭಾಷಣ ಮಾಡಿದ ಅವರು, ನೆಲ, ಜಲ ಹಾಗೂ ಭಾಷೆಯ ವಿಷಯದಲ್ಲಿ ನಾವೇಲ್ಲ ಒಗ್ಗಟ್ಟಿನಿಂದ ಹೋರಾಡುತ್ತೇವೆ. ಈ ವಿಷಯದಲ್ಲಿ ಎಂದೂ ನಾವು ರಾಜಕೀಯ ಮಾಡಬಾರದು ಎಂದು ಅಭಿಪ್ರಾಯಪಟ್ಟರು.
 
ಕಾವೇರಿ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಕಳೆದ 32 ವರ್ಷಗಳಿಂದ ಫಾಲಿ ನಾರಿಮನ್ ಅವರು ಸಮರ್ಥವಾಗಿ ವಾದ ಮಂಡಿಸುತ್ತಿದ್ದಾರೆ. ಸರ್ವಪಕ್ಷ ಸಭೆಯಲ್ಲಿ ತೆಗೆದುಕೊಂಡ ವಿರ್ಧಾರದ ಕುರಿತು ನಾರಿಮನ್ ಅವರಿಗೆ ತಿಳಿಸಲಾಗಿದೆ. ರಾಜ್ಯದ ಹಿತಾಸಕ್ತ ನಮಗೆ ಮುಖ್ಯ ಎಂದು ಹೇಳಿದರು.
 
ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೇ ರಾಜ್ಯದಲ್ಲಿ ಈ ವರ್ಷ ಅತೀ ಕಡಿಮೆ ಮಳೆಯಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿನ ಕೊರತೆ ಉಂಟಾಗಿದೆ. ರೈತರ ಬೆಳೆದ ಬೆಳೆ ನಾಶವಾಗುತ್ತಿದ್ದು, ನಮ್ಮ ರೈತರು ಬೆಳೆಯನ್ನು ತ್ಯಾಗ ಮಾಡಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.
 
ಸದ್ಯ ಕಾವೇರಿ ಜಲಾಶಯದಲ್ಲಿ 27.6 ಟಿಎಂಸಿ ನೀರು ಮಾತ್ರ ಇದ್ದು, ಈ ನೀರು ಕೇವಲ 3 ತಿಂಗಳ ಕಾಲ ಕುಡಿಯಲು ಸಾಕಾಗುತ್ತದೆ. ತಮಿಳುನಾಡಿನಲ್ಲಿ ಈ ಪರಿಸ್ಥಿತಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶುಭಾಂಶು ಶುಕ್ಲಾ ಸಾಧನೆ ಶತಕೋಟಿ ಕನಸುಗಳಿಗೆ ಸ್ಪೂರ್ತಿ: ಪ್ರಧಾನಿ ಮೋದಿ ಬಣ್ಣನೆ

ವಿಶ್ವದ ಅ‌ತ್ಯಂತ ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ರಸ್ತೆ ಅಪಘಾತದಲ್ಲಿ ನಿಧನ

ಬೆಲೆ ಏರಿಕೆಯಿಂದ ಸುಸ್ತಾಗಿದ್ದ ಸಿಲಿಕಾನ್ ಸಿಟಿ ಮಂದಿಗೆ ಇದೀಗ ಆಟೋ ದರ ಬಿಸಿ

ಶುಭಾಂಶು ಶುಕ್ಲ ಭೂಮಿಗಿಳಿಯುತ್ತಿದ್ದಂತೇ ಗಳ ಗಳನೇ ಕಣ್ಣೀರಿಟ್ಟ ತಾಯಿ: ವಿಡಿಯೋ

ಯಶಸ್ವಿಯಾಗಿ ಭೂಮಿಗೆ ಬಂದ ಶುಭಾಂಶು ಶುಕ್ಲಾ ಟೀಂ, ಬಾಹ್ಯಾಕಾಶ ಇತಿಹಾಸದಲ್ಲಿ ಮತ್ತೊಂದು ಮೈಲಿಗಲ್ಲು

ಮುಂದಿನ ಸುದ್ದಿ
Show comments