Webdunia - Bharat's app for daily news and videos

Install App

ಹಣ ಕೊಟ್ಟು ಸಚಿವರಾಗುವ ಸ್ಥಿತಿ ನಮ್ಮಲ್ಲಿಲ್ಲ: ಸಚಿವ ಸುನೀಲ್‌

Webdunia
ಭಾನುವಾರ, 15 ಮೇ 2022 (09:00 IST)
ದಾವಣಗೆರೆ: ಹಣ ಕೊಟ್ಟು ಸಚಿವರಾಗುವ ಸ್ಥಿತಿ ನಮ್ಮ ಪಕ್ಷದಲ್ಲಿಲ್ಲ, ನಮ್ಮಲ್ಲಿ ವಿಚಾರಕ್ಕೆ ಆದ್ಯತೆಯೇ ಹೊರತು ಹಣಕ್ಕಲ್ಲ ಎಂದು ಸಚಿವ ಸುನೀಲ್‌ ಕುಮಾರ್‌ ಹೇಳಿದರು. 
 
ಸಚಿವ ಸಂಪುಟ ವಿಸ್ತರಣೆಯೋ ಅಥವಾ ಪುನಾರಚನೆಯೋ ಅದು ಮುಖ್ಯಮಂತ್ರಿಗಳ ಪರಮಾಧಿಕಾರವಾಗಿದ್ದು, ರಾಜ್ಯಕ್ಕೆ ಒಳಿತಾಗುವ ನಿರ್ಧಾರವನ್ನೇ ಮುಖ್ಯಮಂತ್ರಿಗಳು ಕೈಗೊಳ್ಳುತ್ತಾರೆ. ನಮ್ಮ ವರಿಷ್ಠರಿಗೆ ದೂರದೃಷ್ಟಿಇದ್ದು, ಯಾವ ಸಮಯಕ್ಕೆ ಯಾವ ನಿರ್ಣಯ ಕೈಗೊಳ್ಳಬೇಕೆಂಬುದು ನಾಯಕರಿಗೆ ಗೊತ್ತಿದೆ ಎಂದರು.
 
ಪಕ್ಷವು ನಮಗೆ ಎಲ್ಲವನ್ನೂ ಕೊಟ್ಟಿದ್ದು, ನಾವು ಪಕ್ಷಕ್ಕೆ ಏನನ್ನೂ ಕೊಟ್ಟಿಲ್ಲ. ನಮ್ಮ ಪಕ್ಷದಲ್ಲಿ ವಿಚಾರಕ್ಕೆ ಆದ್ಯತೆಯೇ ಹೊರತು, ಹಣಕ್ಕಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ನಾವು 2023ರ ವಿಧಾನಸಭೆ ಚುನಾವಣೆಗೆ ಹೋಗುತ್ತೇವೆ. ಕಾಂಗ್ರೆಸ್‌ ಪಕ್ಷದವರು ನಾಯಕರೇ ಇಲ್ಲದೆ ಅನಾಥರಂತೆ ಕೋಣೆಯಲ್ಲಿದ್ದಾರೆ ಎಂದರು.
 
ರಾಜ್ಯದ ಜನತೆಗೆ ಭರವಸೆ ಇದ್ದರೆ ಅದು ಬಿಜೆಪಿ ಮೇಲೆ ಹಾಗೂ ಪ್ರಧಾನಿ ಮೋದಿ ನಾಯಕತ್ವದ ಮೇಲೆ ಮಾತ್ರ ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments