Publish Date: Sun, 06 Aug 2023 (14:57 IST)
Updated Date: Sun, 06 Aug 2023 (14:58 IST)
ಬೆಂಗಳೂರು : ಬಿಜೆಪಿ ಜೊತೆ ಹೋಗುವ ದಾರಿದ್ರ್ಯ ನಮಗೂ ಬಂದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ ಬಿಜೆಪಿ ಜೊತೆ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ `ದಾರಿದ್ರ್ಯ ಅಭಿಪ್ರಾಯಕ್ಕೆ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಸುನೀಲ್ ಕುಮಾರ್ ಹೇಳೀಕೆಗೆ ಪ್ರತಿಕ್ರಿಯಿಸಿದ ಅವರು, ಸದನದಲ್ಲಿ ಅವರು ಅಧಿಕೃತ ವಿರೋಧ ಪಕ್ಷ ಅಲ್ಲಿ ಮಾತ್ರ ಕೈ ಜೋಡಿಸಿದ್ದೇವೆ. ಕಾರ್ಯಕರ್ತರಿಗೆ ನಾಡಿನ ಜನರಿಗೆ ಹೇಳೋಕೆ ಬಯಸುತ್ತೇನೆ.
ನಮ್ಮ ಪಕ್ಷ ಅವರ ಜೊತೆ ಮೈತ್ರಿ ಮಾಡಿಕೊಂಡಿಲ್ಲ ಭಿಕ್ಷೆ ಬೇಡಿಕೊಂಡು ನಮ್ಮ ಪಕ್ಷ ಹಿಂದೆ ಹೋಗಲ್ಲ. ರಾಜ್ಯಕ್ಕೆ ಕಾಂಗ್ರೆಸ್ ನಿಂದ ಎಷ್ಟು ಹಾನಿ ಆಗಿದೆಯೋ ಬಿಜೆಪಿಯಿಂದಲೂ ಅಷ್ಟೆ ಆಗಿದೆ ಎಂದರು.