ಚುನಾವಣೆಗೆ ಸಿದ್ಧತೆ ಆರಂಭಿಸಿದ್ದೇವೆ : ಸಿಎಂ

Webdunia
ಶುಕ್ರವಾರ, 3 ಜೂನ್ 2022 (08:49 IST)
ಬೆಂಗಳೂರು : ಬಿಬಿಎಂಪಿ ಚುನಾವಣೆಗೆ ಈಗಿನಿಂದಲೇ ತಯಾರಿ ಮಾಡಲಿದ್ದೇವೆ.

ಪಕ್ಷದ ವತಿಯಿಂದ ಬೂತ್ ಕಮಿಟಿ ಮತ್ತು ವಾರ್ಡ್ ಸಮಿತಿಗಳನ್ನು ಚುರುಕುಗೊಳಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಗರದ ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಇವತ್ತು ನಮ್ಮ ಪಕ್ಷದ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ.

ಬಿಬಿಎಂಪಿ ವ್ಯಾಪ್ತಿಗೆ ಸಂಬಂಧಿಸಿದ ಜಿಲ್ಲಾ ಅಧ್ಯಕ್ಷರು, ಜಿಲ್ಲಾ ಪದಾಧಿಕಾರಿಗಳು, ನನ್ನ ಸಚಿವಸಂಪುಟದ ಸಹೋದ್ಯೋಗಿಗಳ ಮತ್ತು ಶಾಸಕ ಮಿತ್ರರು ಇದ್ದ ಸಭೆಯಲ್ಲಿ ಬಿಬಿಎಂಪಿ ಚುನಾವಣೆ ಬಗ್ಗೆ ಮಾತನಾಡಿದ್ದೇವೆ ಎಂದು ವಿವರಿಸಿದರು. 

ಈಗಾಗಲೇ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಬೇಕು. ಮಳೆಗಾಲವನ್ನು ಗಮನದಲ್ಲಿ ಇಟ್ಟು ಆ ಕಾಮಗಾರಿಗಳನ್ನು ಬೇಗನೆ ಮುಗಿಸಬೇಕು ಎಂದು ನಿರ್ಧರಿಸಲಾಗಿದೆ. ಪಕ್ಷದ “ವಿಷನ್ ಡಾಕ್ಯುಮೆಂಟ್”ಅನ್ನು ಸಿದ್ಧಪಡಿಸಲು ತಜ್ಞರ ಸಮಿತಿಯನ್ನು ನೇಮಿಸಲು ತೀರ್ಮಾನಿಸಲಾಗಿದೆ.

ಪ್ರತಿ 15 ದಿನಗಳಿಗೊಮ್ಮೆ ಸಭೆ ನಡೆಸಬೇಕು. ಸಂಘಟನೆ ಮತ್ತು ಅಭಿವೃದ್ಧಿ ವಿಚಾರದಲ್ಲಿ ನಿರಂತರವಾಗಿ ಚರ್ಚೆ ಮಾಡುತ್ತಿರಬೇಕು. ಜನಾಭಿಪ್ರಾಯ ಪಡೆದು ಪ್ರಣಾಳಿಕೆಯಲ್ಲಿ ಸೇರಿಸಿ ವಿಷನ್ ಡಾಕ್ಯುಮೆಂಟ್ ತಯಾರು ಮಾಡಲು ನಿರ್ಧರಿಸಲಾಗಿದೆ ಎಂದು ಮಾಹಿತಿ ಹಂಚಿಕೊಂಡರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮಹದೇವಪ್ಪರನ್ನು ಭೇಟಿಯಾಗಿ ನವೆಂಬರ್ ಕ್ರಾಂತಿ ಬಗ್ಗೆ ಪರಮೇಶ್ವರ್ ಸ್ಫೋಟಕ ಹೇಳಿಕೆ

Rain Alert, ದೇಶದ ಈ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ

ಬಿಹಾರದಲ್ಲೂ ಇಂಡಿಯಾ ಒಕ್ಕೂಟದ ಫ್ರೀ ಗ್ಯಾರಂಟಿ ಆಫರ್

ಆರ್ ಎಸ್ಎಸ್ ವಿರುದ್ಧ ಸರ್ಕಾರದ ಕುತಂತ್ರಕ್ಕೆ ತಕ್ಕ ಉತ್ತರ ಸಿಕ್ಕಿದೆ: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments