Publish Date: Wed, 08 Jun 2022 (15:12 IST)
Updated Date: Wed, 08 Jun 2022 (15:14 IST)
ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಮೂರನೇ ಅಭ್ಯರ್ಥಿಯೂ ಗೆಲ್ಲಲಿದ್ದಾರೆ. ಹಾಗಾಗಿ ನಾವು ಯಾವುದೇ ಪಕ್ಷಕ್ಕೆ ಬೆಂಬಲ ಕೋಡಿ ಆಹ್ವಾನ ನೀಡಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮೈಸೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ತನ್ನ ಬಲದಿಂದಲೇ ಗೆಲ್ಲಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಇರುವ ಪ್ರಸ್ತಾವನೆಗೂ ನಮಗೂ ಸಂಬಂಧವಿಲ್ಲ ಎಂದರು.
ಲೋಕಾಯುಕ್ತ ನೇಮಕಾತಿಗೆ ಎಲ್ಲಾ ಪ್ರಕ್ರಿಯೆ ಮುಗಿದು ಕೊನೆ ಹಂತದಲ್ಲಿದೆ. ಆದಷ್ಟು ಬೇಗನೆ ಲೋಕಾಯುಕ್ತರು ನೇಮಕವಾಗಲಿದ್ದಾರೆ ಎಂದರು.