ನೆಲ, ಜಲದ ವಿಷಯದಲ್ಲಿ ನಮ್ಮ ಅಭಿಪ್ರಾಯ ಕೇಳುತ್ತಾರೆ. ಆದರೆ, ನಮ್ಮ ಆಗ್ರಹವನ್ನು ಪ್ರಾಮಾಣಿಕವಾಗಿ ಜಾರಿಗೆ ತರಲು ಪ್ರಯತ್ನ ಮಾಡುತ್ತಿಲ್ಲ. ಹೀಗಾಗಿ ಇಂದು ನಡೆಯುವ ಸರ್ವಪಕ್ಷ ಸಭೆ ಬಹಿಷ್ಕರಿಸುತ್ತಿದ್ದೇವೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಆಗ್ರಹವನ್ನು ರಾಜ್ಯ ಸರಕಾರ ಪ್ರಾಮಾಣಿಕವಾಗಿ ಜಾರಿಗೆ ತರಲು ಪ್ರಯತ್ನ ಮಾಡುತ್ತಿಲ್ಲ. ಬದಲಾಗಿ ಸುಪ್ರೀಂ ಕೋರ್ಟ್ ಆದೇಶ ಪಾಲಿಸಬೇಕಾಗುತ್ತದೆ ಎನ್ನುತ್ತಾರೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುವ ಸರ್ವಪಕ್ಷ ಸಭೆಗೆ ಹೋಗುವುದಿಲ್ಲ ಎಂದು ಹೇಳಿದರು.
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ರಾಜ್ಯಕ್ಕೆ ಆಘಾತಕಾರಿ ವಿಷಯ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅಸಮಾಧಾನ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸುಪ್ರೀಂ ಕೋರ್ಟ್ ಆದೇಶ ಧಿಕ್ಕರಿಸುವ ತಾಕತ್ ಇಲ್ಲ. ನೀರಾವರಿ ಸಚಿವ ಎಂ.ಬಿ.ಪಾಟೀಲ್ ಹಾಗೂ ರಾಜ್ಯ ಪರ ವಕೀಲ ನಾರಿಮನ್ ಅವರನ್ನು ಬದಲಾಯಿಸುವಂತೆ ಬಿಜೆಪಿ ಆಗ್ರಹಿಸಿತ್ತು. ಆದರೆ, ರಾಜ್ಯ ಸರಕಾರ ಅವರನ್ನು ಬದಲಾಯಿಸಲು ಹಿಂದೇಟು ಹಾಕುತ್ತಿದೆ ಎಂದು ಆರೋಪಿಸಿ ಬಿಜೆಪಿ ನಾಯಕರು ಸರ್ವಪಕ್ಷ ಸಭೆ ಭಹಿಷ್ಕರಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.