Webdunia - Bharat's app for daily news and videos

Install App

ನಾವೇ ಬಲಿಪಶುಗಳು, ಆದರೆ ವಿಲನ್‌ಗಳಂತೆ ನೋಡಲಾಗುತ್ತಿದೆ: ಸಿಎಂ

Webdunia
ಭಾನುವಾರ, 2 ಅಕ್ಟೋಬರ್ 2016 (13:06 IST)
ಕಾವೇರಿ ವಿಷಯದಲ್ಲಿ ನಾವು ಬಲಿಪಶುಗಳಾಗಿದ್ದೇವೆ. ಆದರೂ ನಮ್ಮನ್ನು ವಿಲನ್‌ಗಳಂತೆ ನೋಡಲಾಗುತ್ತಿದೆ. ನಾವು ಗಾಂಧಿ ಮಾರ್ಗದಲ್ಲಿ ಹೋರಾಡಿ ಗೆಲ್ಲೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 

ಬೆಂಗಳೂರಿನ ಗಾಂಧೀ ಭವನದಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನ್ನಾಡುತ್ತಿದ್ದ ಅವರು, ಕೃಷ್ಣರಾಜಸಾಗರದಲ್ಲಿ ಆಣೆಕಟ್ಟು ಕಟ್ಟಿದವರು ನಾವು. ಅದನ್ನು ಕಟ್ಟಲು ಎಷ್ಟು ಕಷ್ಟಪಟ್ಟಿದ್ದೇವೆ ಎಂಬುದು ನಮಗೆ ಗೊತ್ತು. ಮೈಸೂರು ಮಹಾರಾಜರು ಚಿನ್ನ ಅಡವಿಟ್ಟು ಆಣೆಕಟ್ಟು ಕಟ್ಟಿಸಿದ್ದರು. ಆದರೆ ಈಗ ನಮ್ಮ ಜಲಾಶಯದಲ್ಲಿನ ನೀರನ್ನು ನಮಗೆ ಬಳಸಲಾಗುತ್ತಿಲ್ಲ. ನಮ್ಮ ರೈತರಿಗೆ ನೀರು ಸಿಗುತ್ತಿಲ್ಲ ಎಂದು ಸಿಎಂ ಹತಾಶರಾಗಿ ನುಡಿದಿದ್ದಾರೆ. 
 
ಡ್ಯಾಂ ಕಟ್ಟಲು ಕೇಂದ್ರ ಸರ್ಕಾರ ಒಂದು ನಯಾ ಪೈಸೆ ನೀಡಿಲ್ಲ. ಆದ್ರೂ ನೀರು ಬಿಡಿ, ನೀರು ಬಿಡಿ ಎಂದು ಸುಪ್ರೀಂಕೋರ್ಟ್ ಪದೇ ಪದೇ ಆದೇಶ ನೀಡುತ್ತಿದೆ. ಕುಡಿಯಲು ನೀರಿಲ್ಲ ಅಂದರೆ, ಅದೆಲ್ಲ ಗೊತ್ತಿಲ್ಲ ಮೊದಲು ನೀರು ಬಿಡಿ ಎನ್ನುತ್ತಾರೆ. ನಮ್ಮ ಪರಿಸ್ಥಿತಿ ಸುಪ್ರೀಂಗೆ ಅರ್ಥವೇ ಆಗುತ್ತಿಲ್ಲ. ಇದು ದೊಡ್ಡ ದುರಂತವೇ ಸರಿ. ಈಗಾಗಲೇ ತಮಿಳುನಾಡಿಗೆ 53 ಟಿಎಂಸಿ ನೀರನ್ನು ಹರಿಯ ಬಿಟ್ಟಿದ್ದೇವೆ ಎಂದು ಸಿದ್ದರಾಮಯ್ಯ ಬೇಸರದಿಂದ ನುಡಿದಿದ್ದಾರೆ.
 
ಸುಪ್ರೀಂಕೋರ್ಟ್ ಬಗ್ಗೆ ನಮಗೆ ಅಪಾರ ಗೌರವವಿದೆ . ಆದರೆ ಅನಾನುಕೂಲತೆಯಿಂದ ಅದರ ಆದೇಶವನ್ನು ಪಾಲಿಸಲಾಗುತ್ತಿಲ್ಲ. ಹೀಗಾಗಿ ನಮ್ಮ ಹೋರಾಟ ಅಹಿಂಸಾ ಮಾರ್ಗದಲ್ಲಿರಲಿ. ಗಾಂಧಿಮಾರ್ಗದಲ್ಲಿ ಹೋರಾಟ ಮಾಡೋಣ ಎಂದು ಸಿಎಂ ಹೇಳಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pahalgam Attack: ಪಾಕಿಸ್ತಾನ ವಿರುದ್ಧ ಮತ್ತೊಂದು ದಿಟ್ಟ ಹೆಜ್ಜೆಯಿಟ್ಟ ಭಾರತ

Karnataka SSLC Result:ಮುಂದಿನ ವಾರವೇ ಎಸ್ಸೆಸ್ಸೆಲ್ಸಿ ರಿಸಲ್ಟ್‌ ಪ್ರಕಟ, ಇಲ್ಲಿದೆ ಮಾಹಿತಿ

ಕೇಂದ್ರ ಸರ್ಕಾರದಿಂದಲೇ ಜನಗಣತಿಯೊಂದಿಗೆ ಜಾತಿ ಗಣತಿ ಸಮೀಕ್ಷೆ ನಿರ್ಧಾರ: ಕಾಂಗ್ರೆಸ್‌ಗೆ ಟಾಂಗ್‌

ಈಗೀನ ಮಕ್ಕಳಿಗೆ ಬುದ್ದಿ ಹೇಳುವುದು ಕಷ್ಟ, ಮೊಬೈಲ್ ಗೀಳು ಬಿಡು ಎಂದಿದ್ದಕ್ಕೆ ಯುವತಿ ಹೀಗೇ ಮಾಡೋದಾ

ಪಾಕ್‌ಗೆ ನುಗ್ಗಿ ಹೊಡೆಯಿರಿ: ಅಮಿತ್ ಶಾ ಬಳಿ ಇದನ್ನೇ ಹೇಳಿದ್ದೇನೆ ಎಂದ ಸಚಿವ ಸಂತೋಷ್‌ ಲಾಡ್‌

ಮುಂದಿನ ಸುದ್ದಿ
Show comments