Webdunia - Bharat's app for daily news and videos

Install App

ಕರ್ನಾಟಕದಲ್ಲಿ ಸರಕಾರ ರಚನೆ ಮಾಡಿಯೇ ಮಾಡುತ್ತೇವೆ: ಅರವಿಂದ್‌ ಕೇಜ್ರಿವಾಲ್‌

Webdunia
ಗುರುವಾರ, 21 ಏಪ್ರಿಲ್ 2022 (17:40 IST)
ದೆಹಲಿಯಲ್ಲಿ ಎರಡು ಬಾರಿ ಸರಕಾರ ರಚನೆ ಮಾಡಿದೆವು. ಪಂಜಾಬ್‌ ನಲ್ಲಿ ಸರಕಾರ ರಚಿಸಿದೆವು. ಈಗ ಕರ್ನಾಟಕದಲ್ಲಿ ಸರಕಾರ ರಚನೆ ಮಾಡಿaಯೇ ಮಾಡುತ್ತೇವೆ ಎಂದು ದೆಹಲಿ ಸಿಎಂ ಹಾಗೂ ಆಮ್‌ ಆದ್ಮಿ ಪಕ್ಷದ ನಾಯಕ ಅರವಿಂದ್‌ ಕೇಜ್ರಿವಾಲ್‌ ಘೋಷಿಸಿದ್ದಾರೆ.
ಬೆಂಗಳೂರಿನ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ನಡೆದ ರೈತ ಸಮಾವೇಶದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಈ ಹಿಂದೆ 20 ಪರ್ಸೆಂಟ್‌ ಸರಕಾರ ಇತ್ತು. ಈಗ 40 ಪರ್ಸೆಂಟ್‌ ಸರಕಾರ ಇದೆ. ಆದರೆ ನಮ್ಮದು ಜಿಯೋ ಪರ್ಸೆಂಟ್‌ ಸರಕಾರ. ಈ ಸರಕಾರ ಬೇಕು ಅಂದರೆ ನಮಗೆ ಅವಕಾಶ ಕೊಡಿ ಎಂದರು.
ದೆಹಲಿಯಲ್ಲಿ ನಮ್ಮದು ಶೂನ್ಯ ಪರ್ಸೆಂಟ್‌ ಸರಕಾರ. ಇದಕ್ಕೆ ಕಾರಣ ನಮ್ಮದು ಪಕ್ಕಾ ಪ್ರಮಾಣಿಕ ಸರಕಾರ. ಇಂದು ದೆಹಲಿ ಉತ್ತಮ ಆಡಳಿತಕ್ಕೆ ಹೆಸರಾಗಿದ್ದರೆ ಅದಕ್ಕೆ ಕಾರಣ ನಮ್ಮದು ಭ್ರಷ್ಟಾಚಾರ ರಹಿತ ಸರಕಾರವಾಗಿದೆ. ಈ ಸರಕಾರ ನಿಮಗೆ ಬೇಡವೇ? ಆದ್ದರಿಂದ ಎಲ್ಲರೂ ಆಮ್‌ ಆದ್ಮಿ ಪಕ್ಷಕ್ಕೆ ಸೇರಿ ಪ್ರಮಾಣಿಕ ಸರಕಾರ ರಚನೆ ಮಾಡಲು ಕೈ ಜೋಡಿಸೋಣ ಎಂದು ಕೇಜ್ರಿವಾಲ್‌ ಕರೆ ನೀಡಿದರು.
ದೆಹಲಿಯ ಸರಕಾರಿ ಶಾಲೆಗಳನ್ನು ಅಭಿವೃದ್ದಿಪಡಿಸಲಾಗಿದೆ. ಶೇ.೯೯.೯೭ ಫಲಿತಾಂಶ ಬಂದಿದೆ. ದೆಹಲಿಗೆ ಬಂದು ನೋಡಿ. ಇಲ್ಲಿ ಈಜುಕೊಳ, ಲ್ಯಾಬೊರೇಟರಿ ಮುಂತಾದ ಅತ್ಯಾಧುನಿಕ ಸೌಲಭ್ಯ ನೀಡಲಾಗಿದೆ. ಇದರಿಂದ ಈ ವರ್ಷ 4 ಲಕ್ಷ ವಿದ್ಯಾರ್ಥಿಗಳು ಖಾಸಗಿ ಶಾಲೆ ತೊರೆದು ಸರಕಾರಿ ಶಾಲೆ ಸೇರುತ್ತಿದ್ದಾರೆ ಎಂದು ಅವರು ವಿವರಿಸಿದರು.
ದೆಹಲಿಯಲ್ಲಿ ಉಚಿತ ವಿದ್ಯುತ್‌, ಉಚಿತ ಚಿಕಿತ್ಸೆ, ಉಚಿತ ನೀರು, ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ನೀಡಲಾಗುತ್ತಿದೆ. ಇದಕ್ಕೆ ಕಾರಣ ಭ್ರಷ್ಟಾಚಾರ ರಹಿತ ಹಾಗೂ ಪ್ರಮಾಣಿಕ ಸರಕಾರ ಇರುವುದಕ್ಕೆ ಎಂದು ಅವರು ಹೇಳಿದರು.

ನನ್ನ ವಿರುದ್ಧ ಮೋದಿ ಸರಕಾರ ಸಿಬಿಐ, ಪೊಲೀಸ್‌, ಆದಾಯ ತೆರಿಗೆ, ಜಾರಿ ನಿರ್ದೇಶನಾಲಯ ಸೇರಿದಂತೆ ಎಲ್ಲರಿಂದ ದಾಳಿ ಮಾಡಿಸಿದರು. ಆದರೆ ಏನೂ ಸಿಗದೇ ಕೊನೆಗೆ ಪ್ರಮಾಣಿಕ ಮುಖ್ಯಮಂತ್ರಿ ಅಂತ ಬೆನ್ನು ತಟ್ಟಿದರು ಎಂದು ಕೇಜ್ರಿವಾಲ್‌ ವಿವರಿಸಿದರು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Kasargodu: ಬಾಲ್ಯದ ಘಟನೆಗೆ 50 ವರ್ಷಗಳ ಬಳಿಕ ಪ್ರತೀಕಾರ ತೀರಿಸಿಕೊಂಡ ವ್ಯಕ್ತಿ

ಸತ್ಯ ಹರಿಶ್ಚಂದ್ರರ ತುಂಡುಗಳ ಬಣ್ಣವೆಲ್ಲಾ ಬಯಲಾಗ್ತಿದೆ: ಬಿ ಶ್ರೀರಾಮುಲು

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕೈ ಹೈಕಮಾಂಡ್‌ ಶಾಕ್‌: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟವರಿಗೂ ನಿರಾಸೆ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

ಮುಂದಿನ ಸುದ್ದಿ
Show comments