Select Your Language

Notifications

webdunia
webdunia
webdunia
webdunia

ಬಳ್ಳಾರಿ ಕ್ಷೇತ್ರದ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್‌: ಸಿಎಂ

ಬಳ್ಳಾರಿ ಕ್ಷೇತ್ರದ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್‌: ಸಿಎಂ
ಬಳ್ಳಾರಿ , ಸೋಮವಾರ, 29 ಸೆಪ್ಟಂಬರ್ 2014 (13:28 IST)
ಕಾಂಗ್ರೆಸ್‌ ಅಭ್ಯರ್ಥಿ ಬೆಂಬಲಿಸಿದರೆ ಕ್ಷೇತ್ರದ ಅಭಿವೃದ್ಧಿಗಾಗಿ ವಿಶೇಷ ಪ್ಯಾಕೇಜ್‌ ನೀಡಲಾಗುವುದು’ ಎಂದು ಬಳ್ಳಾರಿ ವಿಧಾನಸಭಾ ಕ್ಷೇತ್ರಕ್ಕೆ ಇತ್ತೀಚೆಗೆ ನಡೆದ ಉಪ ಚುನಾವಣೆ ಸಂದರ್ಭ ಭರವಸೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ 10ಕ್ಕೂ ಅಧಿಕ ಸಚಿವರೊಂದಿಗೆ ಇಂದು ಭೇಟಿ ನೀಡಲಿದ್ದಾರೆ.
 
ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲಿರುವ ಹಾಗೂ, ರೂ 92.41 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ನಡೆಸುವರು. ರಾಷ್ಟ್ರೀಯ ಆರೋಗ್ಯ ವಿಮೆ ಯೋಜನೆಯ ಸೌಲಭ್ಯಕ್ಕೆ ಇದೇ ಸಂದರ್ಭ ಚಾಲನೆ ನೀಡಲಾಗುತ್ತದೆ.
 
ಸಚಿವರಾದ ಎಚ್‌.ಕೆ. ಪಾಟೀಲ, ಅಂಬರೀಷ್‌, ರೋಷನ್‌ ಬೇಗ್‌, ಖಮರುಲ್‌ ಇಸ್ಲಾಂ, ಡಿ.ಕೆ. ಶಿವ ಕುಮಾರ್‌, ದಿನೇಶ್‌ ಗುಂಡೂರಾವ್‌, ಉಮಾಶ್ರೀ, ಪಿ.ಟಿ. ಪರಮೇಶ್ವರ ನಾಯ್ಕ , ಶರಣ ಪ್ರಕಾಶ ಪಾಟೀಲ, ಶಿವರಾಜ್‌ ತಂಗಡಗಿ ಮತ್ತಿತರರು ಭಾಗವಹಿಸಲಿದ್ದಾರೆ.

Share this Story:

Follow Webdunia kannada