ಖಾಸಗಿ ವೈದ್ಯಕೀಯ ಸಂಸ್ಥೆಗಳ ವಿಧೇಯಕ ಮಂಡಿಸಿಯೇ ಸಿದ್ದ : ಸಿಎಂ ಘೋಷಣೆ

Webdunia
ಶುಕ್ರವಾರ, 17 ನವೆಂಬರ್ 2017 (16:21 IST)
ಖಾಸಗಿ ವೈದ್ಯಕೀಯ ಸಂಸ್ಥೆಗಳ ವಿಧೇಯಕ ಮಂಡಿಸಿಯೇ ಸಿದ್ದ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
 
ಖಾಸಗಿ ವೈದ್ಯರ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಮಸೂದೆಯೇ ಬೇಡ ಎಂದು ಹೇಳುವುದನ್ನು ಸರಕಾರ ಒಪ್ಪುವುದಿಲ್ಲ. ಅದರಲ್ಲಿ ಯಾವ ತಿದ್ದುಪಡಿ ಬೇಕು ಎನ್ನುವುದನ್ನು ಮಾತ್ರ ಹೇಳಿ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.
 
ವಿಧೇಯಕದಲ್ಲಿರುವ ಅಂಶಗಳ ಬಗ್ಗೆ ಮಾಹಿತಿ ಗೊತ್ತಿರದೆ ಮುಷ್ಕರ ಮಾಡಿದ್ದು ಎಷ್ಟು ಸರಿ? ಇಂದಿನ ಪರಿಸ್ಥಿತಿಗೆ ಯಾರು ಹೊಣೆ?. ಸೂಕ್ತ ಚಿಕಿತ್ಸೆ ನೀಡದೆ ವ್ಯಕ್ತಿ ಸತ್ತರೆ ನಿಮ್ಮನ್ನು ಕೊಲೆಗಾರ ಎನ್ನಬಾರದೇ? ಎಂದು ವೈದ್ಯರ ವಿರುದ್ಧ ಗರಂ ಆದರು.
 
ವಿಧೇಯಕ ಬೇಡವೇ ಬೇಡ ಎನ್ನುವುದನ್ನು ಬಿಟ್ಟು ಬೇರೆ ಏನಾದರೂ ತೊಂದರೆಗಳಿದ್ದರೆ ಸರಕಾರದ ಗಮನಕ್ಕೆ ತನ್ನಿ. ವೈದ್ಯರು ಪ್ರತಿಭಟನೆ ಮಾಡುವುದು ಸರಿಯಲ್ಲ. ಜನರಿಗೆ ಎಷ್ಟೊಂದು ತೊಂದರೆಯಾಗಿದೆ ಹಲವಾರು ಜೀವಗಳು ಬಲಿಯಾಗಿವೆ ಅದಕ್ಕೆ ನೀವು ಹೊಣೆಯಾಗ್ತೀರಾ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. 
 
ಕೆಲ ಜಿಲ್ಲೆಗಳಲ್ಲಿ ಖಾಸಗಿ ವೈದ್ಯರ ಪ್ರತಿಭಟನೆಯಲ್ಲಿ ಪಾಲ್ಗೊಂಡವರಿಗೆ ಹಣ ನೀಡಲಾಗಿದೆ.ಇದೊಂದು ರಾಜಕೀಯ ಪ್ರೇರಿತ ಮುಷ್ಕರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇರಾನ್, ಅಮೆರಿಕಾ ಯುದ್ಧ ನಿಲ್ಲಿಸಿದ್ದು ನಾವೇ, ನಮ್ಮ ಪ್ರಧಾನಿ ತುಂಬಾ ಸ್ಟ್ರಾಂಗ್ ಎಂದು ಕೊಚ್ಚಿಕೊಳ್ಳುತ್ತಿರುವ ಪಾಕಿಸ್ತಾನ

Karnataka Weather: ಅಬ್ಬಾ.. ಇಂದು ಈ ಜಿಲ್ಲೆಗಳಲ್ಲಿ ರಣ ಭೀಕರ ಬಿಸಿಲು

ಇರಾನ್ ಮೇಲೆ ಭೀಕರ ದಾಳಿಗೆ ಬ್ರೇಕ್: ಕಡೇ ಗಳಿಗೆಯಲ್ಲಿ 15 ದಿನಗಳ ಕದನ ವಿರಾಮ

ಅಸ್ಸಾಂ, ಕೇರಳ, ಪುದುಚೇರಿ ಚುನಾವಣೆ: ಮತದಾರರನ್ನು ಒಲಿಸಿಕೊಳ್ಳಲು ನಾಯಕರ ಕೊನೆ ಹಂತದ ಪ್ರಯತ್ನ ಅಂತ್ಯ

ಇಂದು ರಾತ್ರಿ ಇಡೀ ದೇಶ ನಾಶ ಎಂದು ಬೆದರಿಕೆ ಹಾಕಿದ ಟ್ರಂಪ್: ಇರಾನ್ ಜನತೆ ಮಾಡುತ್ತಿರುವುದೇನು ಗೊತ್ತಾ Video

ಮುಂದಿನ ಸುದ್ದಿ
Show comments