ಖಾಸಗಿ ವೈದ್ಯಕೀಯ ಸಂಸ್ಥೆಗಳ ವಿಧೇಯಕ ಮಂಡಿಸಿಯೇ ಸಿದ್ದ : ಸಿಎಂ ಘೋಷಣೆ

Webdunia
ಶುಕ್ರವಾರ, 17 ನವೆಂಬರ್ 2017 (16:21 IST)
ಖಾಸಗಿ ವೈದ್ಯಕೀಯ ಸಂಸ್ಥೆಗಳ ವಿಧೇಯಕ ಮಂಡಿಸಿಯೇ ಸಿದ್ದ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
 
ಖಾಸಗಿ ವೈದ್ಯರ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಮಸೂದೆಯೇ ಬೇಡ ಎಂದು ಹೇಳುವುದನ್ನು ಸರಕಾರ ಒಪ್ಪುವುದಿಲ್ಲ. ಅದರಲ್ಲಿ ಯಾವ ತಿದ್ದುಪಡಿ ಬೇಕು ಎನ್ನುವುದನ್ನು ಮಾತ್ರ ಹೇಳಿ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.
 
ವಿಧೇಯಕದಲ್ಲಿರುವ ಅಂಶಗಳ ಬಗ್ಗೆ ಮಾಹಿತಿ ಗೊತ್ತಿರದೆ ಮುಷ್ಕರ ಮಾಡಿದ್ದು ಎಷ್ಟು ಸರಿ? ಇಂದಿನ ಪರಿಸ್ಥಿತಿಗೆ ಯಾರು ಹೊಣೆ?. ಸೂಕ್ತ ಚಿಕಿತ್ಸೆ ನೀಡದೆ ವ್ಯಕ್ತಿ ಸತ್ತರೆ ನಿಮ್ಮನ್ನು ಕೊಲೆಗಾರ ಎನ್ನಬಾರದೇ? ಎಂದು ವೈದ್ಯರ ವಿರುದ್ಧ ಗರಂ ಆದರು.
 
ವಿಧೇಯಕ ಬೇಡವೇ ಬೇಡ ಎನ್ನುವುದನ್ನು ಬಿಟ್ಟು ಬೇರೆ ಏನಾದರೂ ತೊಂದರೆಗಳಿದ್ದರೆ ಸರಕಾರದ ಗಮನಕ್ಕೆ ತನ್ನಿ. ವೈದ್ಯರು ಪ್ರತಿಭಟನೆ ಮಾಡುವುದು ಸರಿಯಲ್ಲ. ಜನರಿಗೆ ಎಷ್ಟೊಂದು ತೊಂದರೆಯಾಗಿದೆ ಹಲವಾರು ಜೀವಗಳು ಬಲಿಯಾಗಿವೆ ಅದಕ್ಕೆ ನೀವು ಹೊಣೆಯಾಗ್ತೀರಾ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. 
 
ಕೆಲ ಜಿಲ್ಲೆಗಳಲ್ಲಿ ಖಾಸಗಿ ವೈದ್ಯರ ಪ್ರತಿಭಟನೆಯಲ್ಲಿ ಪಾಲ್ಗೊಂಡವರಿಗೆ ಹಣ ನೀಡಲಾಗಿದೆ.ಇದೊಂದು ರಾಜಕೀಯ ಪ್ರೇರಿತ ಮುಷ್ಕರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರ ಬಜೆಟ್ ರೈತರ ಆದಾಯವನ್ನು ಹೆಚ್ಚಿಸುತ್ತದೆ: ಪ್ರಧಾನಿ ಮೋದಿ ವಿಶ್ವಾಸ

ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ ಬೆನ್ನಲ್ಲೇ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಎಚ್ಚರಿಕೆ

ನೆಚ್ಚಿನ ರೆಸಾರ್ಟ್‌ನಲ್ಲೇ ಮಣ್ಣಾದ ಸಿಜೆ ರಾಯ್‌

ಇಂದೋರ್‌ ಮ್ಯಾರಥಾನ್‌ ವೇಳೆ 25 ವರ್ಷದ ಓಟಗಾರ ಹೃದಯಾಘಾತಕ್ಕೆ ಬಲಿ

ಭಾರತದ ರಕ್ಷಣಾ ಸಾಮರ್ಥ್ಯಗಳನ್ನು ಮತ್ತಷ್ಟು ಬಲಗೊಂಡಿದೆ: ರಾಜನಾಥ್ ಸಿಂಗ್

ಮುಂದಿನ ಸುದ್ದಿ
Show comments