Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವುದು ಖಚಿತ: ಜೆಡಿಎಸ್ ಬಂಡಾಯ ಶಾಸಕರು

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವುದು ಖಚಿತ: ಜೆಡಿಎಸ್ ಬಂಡಾಯ ಶಾಸಕರು
ಬೆಂಗಳೂರು , ಮಂಗಳವಾರ, 7 ಮಾರ್ಚ್ 2017 (15:36 IST)
ಜೆಡಿಎಸ್ ಮುಖ್ಯಸ್ಥರು ನಮಗೆ ಪಕ್ಷದ ಬಾಗಿಲು ಮುಚ್ಚಿದ್ದೇವೆ ಎಂದು ಹೇಳಿದ್ದರಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ನಿರ್ಧರಿಸಿದ್ದೇವೆ ಎಂದು ಜೆಡಿಎಸ್ ಬಂಡಾಯ ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದ್ದಾರೆ.
 
ರಾಮನಗರ ಬಿಡದಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಪಕ್ಷ ತೊರೆಯುವ ಇಚ್ಚೆ ನಮಗಿರಲಿಲ್ಲ. ಆದರೆ, ಪಕ್ಷದ ಮುಖ್ಯಸ್ಥರೇ ನಮಗೆ ಬಾಗಿಲು ಮುಚ್ಚಿದ್ದೇವೆ ಎಂದು ಹೇಳಿದ ನಂತರ ಇತರ ಪಕ್ಷಗಳತ್ತ ಗಮನಹರಿಸಿದ್ದೇವೆ ಎಂದು ತಿಳಿಸಿದ್ದಾರೆ.
 
ಕಾಂಗ್ರೆಸ್ ಪಕ್ಷದಲ್ಲಿ ಸುಮ್ಮನೆ ಯಾರು, ಯಾರಿಗೂ ಟಿಕೆಟ್ ಕೊಡುವುದಿಲ್ಲ.ರಾಜಕೀಯದಲ್ಲಿ ಶಕ್ತಿಯಿಲ್ಲದವರು ಮುಂದುವರಿಯಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.  
 
ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಚರ್ಚೆ ನಡೆಸಿದ್ದು, ಕಾಂಗ್ರೆಸ್ ಪಕ್ಷದ ಸಿದ್ದಾಂತ ಒಪ್ಪಿ ಬರುವುದಾದಲ್ಲಿ ಸ್ವಾಗತಿಸುವುದಾಗಿ ತಿಳಿಸಿದ್ದಾರೆ. ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರೊಂದಿಗೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆಂದು ಜೆಡಿಎಸ್ ಬಂಡಾಯ ಶಾಸಕ ಎಚ್.ಸಿ.ಬಾಲಕೃಷ್ಣ ಮಾಹಿತಿ ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಈಶ್ವರಪ್ಪ ಅಬ್ಬರಕ್ಕೆ ಮಣಿದ ಬಿಎಸ್‌ವೈ: ಕೆಲ ಜಿಲ್ಲಾಧ್ಯಕ್ಷರ ಬದಲಾವಣೆಗೆ ಸಮ್ಮತಿ