Select Your Language

Notifications

webdunia
webdunia
webdunia
webdunia

ತಮಿಳುನಾಡಿಗೆ ಒಂದು ಹನಿ ನೀರು ಬಿಡೋಲ್ಲ: ಕುಮಾರಸ್ವಾಮಿ

ತಮಿಳುನಾಡಿಗೆ ಒಂದು ಹನಿ ನೀರು ಬಿಡೋಲ್ಲ: ಕುಮಾರಸ್ವಾಮಿ
ಬೆಂಗಳೂರು , ಬುಧವಾರ, 21 ಸೆಪ್ಟಂಬರ್ 2016 (19:52 IST)
ತಮಿಳುನಾಡಿಗೆ ಒಂದು ಹನಿ ನೀರು ಬಿಡುವುದು ಬೇಡ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಗುಡುಗಿದ್ದಾರೆ. 
 
ರಾಜ್ಯದ ವಿಧಾನಸಭೆ ಸುಪ್ರೀಂಕೋರ್ಟ್‌ಗಿಂತ ಉನ್ನತ ಮಟ್ಟದ್ದು. ಆದ್ದರಿಂದ, ತುರ್ತು ಅಧಿವೇಶನ ಕರೆಯುವಂತೆ ಸಲಹೆ ನೀಡಿದ್ದೇವೆ. ಅಧಿವೇಶನದಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
 
ವಿಧಾನಸಬೆ ತುರ್ತು ಅಧಿವೇಶನದಲ್ಲಿ ಸರಕಾರ ಸುಪ್ರೀಂಕೋರ್ಟ್ ಆದೇಶ ವಿರೋಧಿಸಿ ಸುಗ್ರಿವಾಜ್ಞೆ ಜಾರಿಗೆ ತಂದಲ್ಲಿ ಅದಕ್ಕೆ ಬೆಂಬಲ ಸೂಚಿಸುವುದಾಗಿ ತಿಳಿಸಿದ್ದಾರೆ.
 
ಸಂವಿಧಾನದ ಬಿಕ್ಕಟ್ಟು ಎದುರಾದರೂ ಪರವಾಗಿಲ್ಲ. ನ್ಯಾಯಾಂಗ ನಿಂದನೆಯಾದರೂ ಹೆದರುವುದಿಲ್ಲ. ಸರಕಾರದೊಂದಿಗೆ ನಾವಿದ್ದೇವೆ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಹನಿ ನೀರು ಬಿಡುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ತೀವ್ರ ವಿರೋಧ: ಡಿ.ಕೆ.ಶಿವಕುಮಾರ್